AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ
ಅಡುಗೆ ಅನಿಲ ಸಿಲಿಂಡರ್
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 04, 2021 | 3:06 PM

Share

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು LPG ದರವನ್ನು ಹೆಚ್ಚಿಸಿವೆ. ನಗರ ಸೇರಿದಂತೆ ದೇಶದ ವಿವಿಧೆಡೆ ಅಡುಗೆ ಅನಿಲ ಸಿಲಿಂಡರ್‌ಗಳು ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಹೆಚ್ಚಾಗಿವೆ. ಬೆಲೆ ಏರಿಕೆ ಇಂದಿನಿಂದಲೇ ಅನ್ವಯವಾಗುತ್ತಿದ್ದು, ಪ್ರತಿ ಸಿಲಿಂಡರ್​ ಮೇಲಿನ ದರವು ₹ 25ರಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ ₹ 25 ಹೆಚ್ಚಳದ ನಂತರ ₹ 817.50ಕ್ಕೆ ಸಿಲಿಂಡರ್ ಲಭ್ಯವಾಗುತ್ತಿದೆ. ಫೆ.1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹ 190ರಷ್ಟು ಹೆಚ್ಚಿಸಲಾಗಿತ್ತು.

ಡಿಸೆಂಬರ್‌ನಲ್ಲಿ ಅಡುಗೆ ಅನಿಲದ ಬೆಲೆ ಎರಡು ಬಾರಿ ಹೆಚ್ಚಾಗಿತ್ತು. ಕಳೆದ ಎರಡು ತಿಂಗಳುಗಳಲ್ಲಿ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹ 60ರಷ್ಟು ಹೆಚ್ಚಳ ಕಂಡುಬಂದಿದೆ. ಡಿಸೆಂಬರ್‌ನಲ್ಲಿ ಪ್ರತಿ ಸಿಲಿಂಡರ್‌ ₹ 657ಕ್ಕೆ ಲಭ್ಯವಿತ್ತು. ಇದೀಗ ಈ ದರವು ₹ 722 ಮುಟ್ಟಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳು ₹ 1,198ಕ್ಕೆ ಲಭ್ಯವಿತ್ತು.  ಡಿಸೆಂಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ₹ 1365.50 ಮುಟ್ಟಿತ್ತು.

ಪೆಟ್ರೋಲಿಯಂ ಸಬ್ಸಿಡಿ ಕಡಿತವನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2021-22ರ ಬಜೆಟ್​ನಲ್ಲಿ ಘೋಷಿಸಿದ ನಂತರ ಈ ಬೆಲೆ ಏರಿಕೆ ಕಂಡು ಬಂದಿದೆ. ಈ ವರ್ಷದ ಬಜೆಟ್​ನಲ್ಲಿ ಪೆಟ್ರೊಲಿಯಂ ಸಬ್ಸಿಡಿಗೆ ₹ 12,995 ಕೋಟಿ ಮೀಸಲಿಡುವುದಾಗಿ ಘೋಷಿಸಲಾಗಿದೆ.

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ವೇಳೆ 700 ರೂಪಾಯಿ ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ?

Published On - 3:05 pm, Thu, 4 February 21

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?