AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ
ಅಡುಗೆ ಅನಿಲ ಸಿಲಿಂಡರ್
shruti hegde
| Edited By: |

Updated on:Feb 04, 2021 | 3:06 PM

Share

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು LPG ದರವನ್ನು ಹೆಚ್ಚಿಸಿವೆ. ನಗರ ಸೇರಿದಂತೆ ದೇಶದ ವಿವಿಧೆಡೆ ಅಡುಗೆ ಅನಿಲ ಸಿಲಿಂಡರ್‌ಗಳು ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಹೆಚ್ಚಾಗಿವೆ. ಬೆಲೆ ಏರಿಕೆ ಇಂದಿನಿಂದಲೇ ಅನ್ವಯವಾಗುತ್ತಿದ್ದು, ಪ್ರತಿ ಸಿಲಿಂಡರ್​ ಮೇಲಿನ ದರವು ₹ 25ರಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ ₹ 25 ಹೆಚ್ಚಳದ ನಂತರ ₹ 817.50ಕ್ಕೆ ಸಿಲಿಂಡರ್ ಲಭ್ಯವಾಗುತ್ತಿದೆ. ಫೆ.1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹ 190ರಷ್ಟು ಹೆಚ್ಚಿಸಲಾಗಿತ್ತು.

ಡಿಸೆಂಬರ್‌ನಲ್ಲಿ ಅಡುಗೆ ಅನಿಲದ ಬೆಲೆ ಎರಡು ಬಾರಿ ಹೆಚ್ಚಾಗಿತ್ತು. ಕಳೆದ ಎರಡು ತಿಂಗಳುಗಳಲ್ಲಿ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹ 60ರಷ್ಟು ಹೆಚ್ಚಳ ಕಂಡುಬಂದಿದೆ. ಡಿಸೆಂಬರ್‌ನಲ್ಲಿ ಪ್ರತಿ ಸಿಲಿಂಡರ್‌ ₹ 657ಕ್ಕೆ ಲಭ್ಯವಿತ್ತು. ಇದೀಗ ಈ ದರವು ₹ 722 ಮುಟ್ಟಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳು ₹ 1,198ಕ್ಕೆ ಲಭ್ಯವಿತ್ತು.  ಡಿಸೆಂಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ₹ 1365.50 ಮುಟ್ಟಿತ್ತು.

ಪೆಟ್ರೋಲಿಯಂ ಸಬ್ಸಿಡಿ ಕಡಿತವನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2021-22ರ ಬಜೆಟ್​ನಲ್ಲಿ ಘೋಷಿಸಿದ ನಂತರ ಈ ಬೆಲೆ ಏರಿಕೆ ಕಂಡು ಬಂದಿದೆ. ಈ ವರ್ಷದ ಬಜೆಟ್​ನಲ್ಲಿ ಪೆಟ್ರೊಲಿಯಂ ಸಬ್ಸಿಡಿಗೆ ₹ 12,995 ಕೋಟಿ ಮೀಸಲಿಡುವುದಾಗಿ ಘೋಷಿಸಲಾಗಿದೆ.

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ವೇಳೆ 700 ರೂಪಾಯಿ ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ?

Published On - 3:05 pm, Thu, 4 February 21

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?