AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ.

LPG Gas Cylinder Price ಇಂದಿನಿಂದ ಅಡುಗೆ ಅನಿಲ ಸಿಲಿಂಡರ್​ನಲ್ಲಿ ₹ 25 ಬೆಲೆ ಏರಿಕೆ
ಅಡುಗೆ ಅನಿಲ ಸಿಲಿಂಡರ್
shruti hegde
| Edited By: |

Updated on:Feb 04, 2021 | 3:06 PM

Share

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು LPG ದರವನ್ನು ಹೆಚ್ಚಿಸಿವೆ. ನಗರ ಸೇರಿದಂತೆ ದೇಶದ ವಿವಿಧೆಡೆ ಅಡುಗೆ ಅನಿಲ ಸಿಲಿಂಡರ್‌ಗಳು ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಹೆಚ್ಚಾಗಿವೆ. ಬೆಲೆ ಏರಿಕೆ ಇಂದಿನಿಂದಲೇ ಅನ್ವಯವಾಗುತ್ತಿದ್ದು, ಪ್ರತಿ ಸಿಲಿಂಡರ್​ ಮೇಲಿನ ದರವು ₹ 25ರಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ₹ 697 ಇದ್ದ 14 ಕೆಜಿ ಸಿಲಿಂಡರ್ ಬೆಲೆ ಇದೀಗ ₹ 722ಕ್ಕೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಮೊದಲು ₹ 707 ಇತ್ತು. ಇದೀಗ ₹ 732ಕ್ಕೆ ಮಾರಾಟವಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ ₹ 25 ಹೆಚ್ಚಳದ ನಂತರ ₹ 817.50ಕ್ಕೆ ಸಿಲಿಂಡರ್ ಲಭ್ಯವಾಗುತ್ತಿದೆ. ಫೆ.1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹ 190ರಷ್ಟು ಹೆಚ್ಚಿಸಲಾಗಿತ್ತು.

ಡಿಸೆಂಬರ್‌ನಲ್ಲಿ ಅಡುಗೆ ಅನಿಲದ ಬೆಲೆ ಎರಡು ಬಾರಿ ಹೆಚ್ಚಾಗಿತ್ತು. ಕಳೆದ ಎರಡು ತಿಂಗಳುಗಳಲ್ಲಿ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹ 60ರಷ್ಟು ಹೆಚ್ಚಳ ಕಂಡುಬಂದಿದೆ. ಡಿಸೆಂಬರ್‌ನಲ್ಲಿ ಪ್ರತಿ ಸಿಲಿಂಡರ್‌ ₹ 657ಕ್ಕೆ ಲಭ್ಯವಿತ್ತು. ಇದೀಗ ಈ ದರವು ₹ 722 ಮುಟ್ಟಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳು ₹ 1,198ಕ್ಕೆ ಲಭ್ಯವಿತ್ತು.  ಡಿಸೆಂಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ₹ 1365.50 ಮುಟ್ಟಿತ್ತು.

ಪೆಟ್ರೋಲಿಯಂ ಸಬ್ಸಿಡಿ ಕಡಿತವನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2021-22ರ ಬಜೆಟ್​ನಲ್ಲಿ ಘೋಷಿಸಿದ ನಂತರ ಈ ಬೆಲೆ ಏರಿಕೆ ಕಂಡು ಬಂದಿದೆ. ಈ ವರ್ಷದ ಬಜೆಟ್​ನಲ್ಲಿ ಪೆಟ್ರೊಲಿಯಂ ಸಬ್ಸಿಡಿಗೆ ₹ 12,995 ಕೋಟಿ ಮೀಸಲಿಡುವುದಾಗಿ ಘೋಷಿಸಲಾಗಿದೆ.

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ವೇಳೆ 700 ರೂಪಾಯಿ ಕ್ಯಾಶ್​ಬ್ಯಾಕ್ ಪಡೆಯುವುದು ಹೇಗೆ?

Published On - 3:05 pm, Thu, 4 February 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!