ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!

ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 8:16 PM

ಅಂದಿನ ಮ್ಯಾಚ್​ನಲ್ಲಿ ಮಳೆಯಂತೆ ಬೌಂಡರಿ, ಸಿಕ್ಸರ್​ಗಳು ಸುರಿದಿದ್ದವು. ಫೀಲ್ಡರ್​ಗಳು ಸಿಕ್ಸ್​​ ಗಡಿಯಿಂದ ಚೆಂಡನ್ನು​ ಹೆಕ್ಕಿ ಹೆಕ್ಕಿ ಸುಸ್ತಾಗಿದ್ದರು. ಬೌಲರ್​ಗಳಂತೂ ಬಾಲ್​ ಮಾಡಲು ಹಿಂದೇಟು ಹಾಕುವ ಪರಿಸ್ಥಿತಿ ಬಂದೊದಗಿತ್ತು. ಸಿಕ್ಸ್​​ ಗಡಿಯಲ್ಲಿ ಬಾಲ್​ ಹೆಕ್ಕಿ ಸುಸ್ತಾದ ಆಟಗಾರರು ಆಗಾಗ ನೀರು ಕುಡಿದು ಸುಧಾರಿಸಿಕೊಳ್ಳುತ್ತಿದ್ದರು. ಬ್ಯಾಟಿಂಗ್​ಗೆ ನಿಂತಿದ್ದ ಕನ್ನಡಿಗನ ಬ್ಯಾಟ್​ನಿಂದ 129 ಬಾಲ್​ಗಳಲ್ಲಿ ತ್ರಿಶತಕ ಸಿಡಿದಿತ್ತು.

ಟೀಂ ಇಂಡಿಯಾ ಆಟಗಾರ ರೋಹಿತ್​ ಶರ್ಮಾ 2014ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 173 ಬಾಲ್​ಗಳಲ್ಲಿ 264ರನ್​ ಸಿಡಿಸಿ ದಾಖಲೆ ಬರೆದಿದ್ದರು. 33 ಬೌಂಡರಿ ಮತ್ತು 9 ಸಿಕ್ಸ್​ಗಳನ್ನು ಇದು ಒಳಗೊಂಡಿತ್ತು. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ದಾಖಲೆ ಇವರ ಹೆಸರಲ್ಲಿದೆ. ಆದರೆ, ಈವರೆಗೆ ಯಾರೊಬ್ಬರಿಗೂ ಏಕದಿನದಲ್ಲಿ ತ್ರಿಶತಕ ಬಾರಿಸಲು ಸಾಧ್ಯವಾಗಿಲ್ಲ. ಈಗ, ಕನ್ನಡಿಗನೋರ್ವ ಈಗ ಇಂಥ ಸಾಧನೆ ಮಾಡಿ ತೋರಿಸಿದ್ದಾರೆ.

ಕನ್ನಡಿಗ ಲವನೀತ್ ಸಿಸೋಡಿಯಾ ಹೀಗೊಂದು ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಲವನೀತ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ. ಲವನೀತ್​ ಸಿಸೋಡಿಯಾ 129 ಬಾಲ್​ಗಳಲ್ಲಿ 312ರನ್​ ಬಾರಿಸಿದ್ದಾರೆ. ಸ್ಟ್ರೈಕ್​ ರೇಟ್​ ಬರೋಬ್ಬರಿ 200. ಇವರು ಆ ಮ್ಯಾಚ್​ನಲ್ಲಿ ಬರೋಬ್ಬರಿ 26 ಸಿಕ್ಸ್​, 26 ಬೌಂಡರಿ ಬಾರಿಸಿದ್ದರು.

ಲವನೀತ್ 2019 ಮತ್ತು 2020 ರಲ್ಲಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಅವರು ಗಮನಾರ್ಹ ಪ್ರದರ್ಶನ ನೀಡಿರಲಿಲ್ಲ. ಆದರೆ, ಈ ಯುವ ಆಟಗಾರ ಈಗ ಹೊಸ ಸಾಧನೆ ಮಾಡಿದ್ದಾರೆ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ