AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!

ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 8:16 PM

Share

ಅಂದಿನ ಮ್ಯಾಚ್​ನಲ್ಲಿ ಮಳೆಯಂತೆ ಬೌಂಡರಿ, ಸಿಕ್ಸರ್​ಗಳು ಸುರಿದಿದ್ದವು. ಫೀಲ್ಡರ್​ಗಳು ಸಿಕ್ಸ್​​ ಗಡಿಯಿಂದ ಚೆಂಡನ್ನು​ ಹೆಕ್ಕಿ ಹೆಕ್ಕಿ ಸುಸ್ತಾಗಿದ್ದರು. ಬೌಲರ್​ಗಳಂತೂ ಬಾಲ್​ ಮಾಡಲು ಹಿಂದೇಟು ಹಾಕುವ ಪರಿಸ್ಥಿತಿ ಬಂದೊದಗಿತ್ತು. ಸಿಕ್ಸ್​​ ಗಡಿಯಲ್ಲಿ ಬಾಲ್​ ಹೆಕ್ಕಿ ಸುಸ್ತಾದ ಆಟಗಾರರು ಆಗಾಗ ನೀರು ಕುಡಿದು ಸುಧಾರಿಸಿಕೊಳ್ಳುತ್ತಿದ್ದರು. ಬ್ಯಾಟಿಂಗ್​ಗೆ ನಿಂತಿದ್ದ ಕನ್ನಡಿಗನ ಬ್ಯಾಟ್​ನಿಂದ 129 ಬಾಲ್​ಗಳಲ್ಲಿ ತ್ರಿಶತಕ ಸಿಡಿದಿತ್ತು.

ಟೀಂ ಇಂಡಿಯಾ ಆಟಗಾರ ರೋಹಿತ್​ ಶರ್ಮಾ 2014ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 173 ಬಾಲ್​ಗಳಲ್ಲಿ 264ರನ್​ ಸಿಡಿಸಿ ದಾಖಲೆ ಬರೆದಿದ್ದರು. 33 ಬೌಂಡರಿ ಮತ್ತು 9 ಸಿಕ್ಸ್​ಗಳನ್ನು ಇದು ಒಳಗೊಂಡಿತ್ತು. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ದಾಖಲೆ ಇವರ ಹೆಸರಲ್ಲಿದೆ. ಆದರೆ, ಈವರೆಗೆ ಯಾರೊಬ್ಬರಿಗೂ ಏಕದಿನದಲ್ಲಿ ತ್ರಿಶತಕ ಬಾರಿಸಲು ಸಾಧ್ಯವಾಗಿಲ್ಲ. ಈಗ, ಕನ್ನಡಿಗನೋರ್ವ ಈಗ ಇಂಥ ಸಾಧನೆ ಮಾಡಿ ತೋರಿಸಿದ್ದಾರೆ.

ಕನ್ನಡಿಗ ಲವನೀತ್ ಸಿಸೋಡಿಯಾ ಹೀಗೊಂದು ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಲವನೀತ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ. ಲವನೀತ್​ ಸಿಸೋಡಿಯಾ 129 ಬಾಲ್​ಗಳಲ್ಲಿ 312ರನ್​ ಬಾರಿಸಿದ್ದಾರೆ. ಸ್ಟ್ರೈಕ್​ ರೇಟ್​ ಬರೋಬ್ಬರಿ 200. ಇವರು ಆ ಮ್ಯಾಚ್​ನಲ್ಲಿ ಬರೋಬ್ಬರಿ 26 ಸಿಕ್ಸ್​, 26 ಬೌಂಡರಿ ಬಾರಿಸಿದ್ದರು.

ಲವನೀತ್ 2019 ಮತ್ತು 2020 ರಲ್ಲಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಅವರು ಗಮನಾರ್ಹ ಪ್ರದರ್ಶನ ನೀಡಿರಲಿಲ್ಲ. ಆದರೆ, ಈ ಯುವ ಆಟಗಾರ ಈಗ ಹೊಸ ಸಾಧನೆ ಮಾಡಿದ್ದಾರೆ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!