AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!

ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 8:16 PM

Share

ಅಂದಿನ ಮ್ಯಾಚ್​ನಲ್ಲಿ ಮಳೆಯಂತೆ ಬೌಂಡರಿ, ಸಿಕ್ಸರ್​ಗಳು ಸುರಿದಿದ್ದವು. ಫೀಲ್ಡರ್​ಗಳು ಸಿಕ್ಸ್​​ ಗಡಿಯಿಂದ ಚೆಂಡನ್ನು​ ಹೆಕ್ಕಿ ಹೆಕ್ಕಿ ಸುಸ್ತಾಗಿದ್ದರು. ಬೌಲರ್​ಗಳಂತೂ ಬಾಲ್​ ಮಾಡಲು ಹಿಂದೇಟು ಹಾಕುವ ಪರಿಸ್ಥಿತಿ ಬಂದೊದಗಿತ್ತು. ಸಿಕ್ಸ್​​ ಗಡಿಯಲ್ಲಿ ಬಾಲ್​ ಹೆಕ್ಕಿ ಸುಸ್ತಾದ ಆಟಗಾರರು ಆಗಾಗ ನೀರು ಕುಡಿದು ಸುಧಾರಿಸಿಕೊಳ್ಳುತ್ತಿದ್ದರು. ಬ್ಯಾಟಿಂಗ್​ಗೆ ನಿಂತಿದ್ದ ಕನ್ನಡಿಗನ ಬ್ಯಾಟ್​ನಿಂದ 129 ಬಾಲ್​ಗಳಲ್ಲಿ ತ್ರಿಶತಕ ಸಿಡಿದಿತ್ತು.

ಟೀಂ ಇಂಡಿಯಾ ಆಟಗಾರ ರೋಹಿತ್​ ಶರ್ಮಾ 2014ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 173 ಬಾಲ್​ಗಳಲ್ಲಿ 264ರನ್​ ಸಿಡಿಸಿ ದಾಖಲೆ ಬರೆದಿದ್ದರು. 33 ಬೌಂಡರಿ ಮತ್ತು 9 ಸಿಕ್ಸ್​ಗಳನ್ನು ಇದು ಒಳಗೊಂಡಿತ್ತು. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ದಾಖಲೆ ಇವರ ಹೆಸರಲ್ಲಿದೆ. ಆದರೆ, ಈವರೆಗೆ ಯಾರೊಬ್ಬರಿಗೂ ಏಕದಿನದಲ್ಲಿ ತ್ರಿಶತಕ ಬಾರಿಸಲು ಸಾಧ್ಯವಾಗಿಲ್ಲ. ಈಗ, ಕನ್ನಡಿಗನೋರ್ವ ಈಗ ಇಂಥ ಸಾಧನೆ ಮಾಡಿ ತೋರಿಸಿದ್ದಾರೆ.

ಕನ್ನಡಿಗ ಲವನೀತ್ ಸಿಸೋಡಿಯಾ ಹೀಗೊಂದು ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಲವನೀತ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ. ಲವನೀತ್​ ಸಿಸೋಡಿಯಾ 129 ಬಾಲ್​ಗಳಲ್ಲಿ 312ರನ್​ ಬಾರಿಸಿದ್ದಾರೆ. ಸ್ಟ್ರೈಕ್​ ರೇಟ್​ ಬರೋಬ್ಬರಿ 200. ಇವರು ಆ ಮ್ಯಾಚ್​ನಲ್ಲಿ ಬರೋಬ್ಬರಿ 26 ಸಿಕ್ಸ್​, 26 ಬೌಂಡರಿ ಬಾರಿಸಿದ್ದರು.

ಲವನೀತ್ 2019 ಮತ್ತು 2020 ರಲ್ಲಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಅವರು ಗಮನಾರ್ಹ ಪ್ರದರ್ಶನ ನೀಡಿರಲಿಲ್ಲ. ಆದರೆ, ಈ ಯುವ ಆಟಗಾರ ಈಗ ಹೊಸ ಸಾಧನೆ ಮಾಡಿದ್ದಾರೆ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು