AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!

ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಕನ್ನಡಿಗನ ವಿಶ್ವದಾಖಲೆ: 129 ಎಸೆತಗಳಲ್ಲಿ ತ್ರಿಶತಕ!
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 8:16 PM

Share

ಅಂದಿನ ಮ್ಯಾಚ್​ನಲ್ಲಿ ಮಳೆಯಂತೆ ಬೌಂಡರಿ, ಸಿಕ್ಸರ್​ಗಳು ಸುರಿದಿದ್ದವು. ಫೀಲ್ಡರ್​ಗಳು ಸಿಕ್ಸ್​​ ಗಡಿಯಿಂದ ಚೆಂಡನ್ನು​ ಹೆಕ್ಕಿ ಹೆಕ್ಕಿ ಸುಸ್ತಾಗಿದ್ದರು. ಬೌಲರ್​ಗಳಂತೂ ಬಾಲ್​ ಮಾಡಲು ಹಿಂದೇಟು ಹಾಕುವ ಪರಿಸ್ಥಿತಿ ಬಂದೊದಗಿತ್ತು. ಸಿಕ್ಸ್​​ ಗಡಿಯಲ್ಲಿ ಬಾಲ್​ ಹೆಕ್ಕಿ ಸುಸ್ತಾದ ಆಟಗಾರರು ಆಗಾಗ ನೀರು ಕುಡಿದು ಸುಧಾರಿಸಿಕೊಳ್ಳುತ್ತಿದ್ದರು. ಬ್ಯಾಟಿಂಗ್​ಗೆ ನಿಂತಿದ್ದ ಕನ್ನಡಿಗನ ಬ್ಯಾಟ್​ನಿಂದ 129 ಬಾಲ್​ಗಳಲ್ಲಿ ತ್ರಿಶತಕ ಸಿಡಿದಿತ್ತು.

ಟೀಂ ಇಂಡಿಯಾ ಆಟಗಾರ ರೋಹಿತ್​ ಶರ್ಮಾ 2014ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 173 ಬಾಲ್​ಗಳಲ್ಲಿ 264ರನ್​ ಸಿಡಿಸಿ ದಾಖಲೆ ಬರೆದಿದ್ದರು. 33 ಬೌಂಡರಿ ಮತ್ತು 9 ಸಿಕ್ಸ್​ಗಳನ್ನು ಇದು ಒಳಗೊಂಡಿತ್ತು. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ದಾಖಲೆ ಇವರ ಹೆಸರಲ್ಲಿದೆ. ಆದರೆ, ಈವರೆಗೆ ಯಾರೊಬ್ಬರಿಗೂ ಏಕದಿನದಲ್ಲಿ ತ್ರಿಶತಕ ಬಾರಿಸಲು ಸಾಧ್ಯವಾಗಿಲ್ಲ. ಈಗ, ಕನ್ನಡಿಗನೋರ್ವ ಈಗ ಇಂಥ ಸಾಧನೆ ಮಾಡಿ ತೋರಿಸಿದ್ದಾರೆ.

ಕನ್ನಡಿಗ ಲವನೀತ್ ಸಿಸೋಡಿಯಾ ಹೀಗೊಂದು ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕಾರ್ಪೊರೇಟ್ ಏಕದಿನ ಪಂದ್ಯದಲ್ಲಿ 21 ವರ್ಷದ ಕರ್ನಾಟಕದ ಬ್ಯಾಟ್ಸ್‌ಮನ್ ಲವನೀತ್ ಸಿಸೋಡಿಯಾ ಕೇವಲ 129 ಎಸೆತಗಳಲ್ಲಿ ತ್ರಿಶತಕ ಬಾರಿಸಿದ್ದಾರೆ. ಲವನೀತ್​ ಸಿಸೋಡಿಯಾ 129 ಬಾಲ್​ಗಳಲ್ಲಿ 312ರನ್​ ಬಾರಿಸಿದ್ದಾರೆ. ಸ್ಟ್ರೈಕ್​ ರೇಟ್​ ಬರೋಬ್ಬರಿ 200. ಇವರು ಆ ಮ್ಯಾಚ್​ನಲ್ಲಿ ಬರೋಬ್ಬರಿ 26 ಸಿಕ್ಸ್​, 26 ಬೌಂಡರಿ ಬಾರಿಸಿದ್ದರು.

ಲವನೀತ್ 2019 ಮತ್ತು 2020 ರಲ್ಲಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಅವರು ಗಮನಾರ್ಹ ಪ್ರದರ್ಶನ ನೀಡಿರಲಿಲ್ಲ. ಆದರೆ, ಈ ಯುವ ಆಟಗಾರ ಈಗ ಹೊಸ ಸಾಧನೆ ಮಾಡಿದ್ದಾರೆ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ