AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಆತ್ಮಹತ್ಯೆಗೆ ಪ್ರತಾಪ್ ಸಿಂಹ ಕಾರಣವಲ್ಲ -KPCC ವಕ್ತಾರ ಎಂ.ಲಕ್ಷ್ಮಣ ಹೀಗೆ ಹೇಳಿದ್ದೇಕೆ?

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಎಂ.ಲಕ್ಷ್ಮಣ ರೋಲ್‌ಕಾಲ್‌ ಗಿರಾಕಿ ಎಂದು ಸಂಸದ ಪ್ರತಾಪ್ ಸಿಂಹ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಲಕ್ಷ್ಮಣ ತಿರುಗೇಟು ನೀಡಿದ್ದಾರೆ. ಪ್ರತಾಪ್‌ ಸಿಂಹಗೆ ಲಕ್ಷ್ಮಣ ಚಾಲೆಂಜ್ ಪ್ರತಾಪ್ ಸಿಂಹ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ದಾರೆ. ನಾನೊಬ್ಬ ರೋಲ್ ‌ಕಾಲ್ ಗಿರಾಕಿ ಎಂದು ಆರೋಪಿಸಿದ್ದಾರೆ. ನಾನೀಗ ಸಂಸದ ಪ್ರತಾಪ್ ಸಿಂಹಗೆ ಚಾಲೆಂಜ್ ಮಾಡುತ್ತೇನೆ. ಕಲಾಮಂದಿರದಲ್ಲಿ ಈ ಬಗ್ಗೆ ಚರ್ಚೆ ಮಾಡುವುದಕ್ಕೆ ಬರಲಿ. ಅವರ ಮೇಲಿನ […]

ನನ್ನ ಆತ್ಮಹತ್ಯೆಗೆ ಪ್ರತಾಪ್ ಸಿಂಹ ಕಾರಣವಲ್ಲ -KPCC ವಕ್ತಾರ ಎಂ.ಲಕ್ಷ್ಮಣ ಹೀಗೆ ಹೇಳಿದ್ದೇಕೆ?
ಆಯೇಷಾ ಬಾನು
| Edited By: |

Updated on: Aug 30, 2020 | 2:19 PM

Share

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಎಂ.ಲಕ್ಷ್ಮಣ ರೋಲ್‌ಕಾಲ್‌ ಗಿರಾಕಿ ಎಂದು ಸಂಸದ ಪ್ರತಾಪ್ ಸಿಂಹ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಲಕ್ಷ್ಮಣ ತಿರುಗೇಟು ನೀಡಿದ್ದಾರೆ.

ಪ್ರತಾಪ್‌ ಸಿಂಹಗೆ ಲಕ್ಷ್ಮಣ ಚಾಲೆಂಜ್ ಪ್ರತಾಪ್ ಸಿಂಹ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ದಾರೆ. ನಾನೊಬ್ಬ ರೋಲ್ ‌ಕಾಲ್ ಗಿರಾಕಿ ಎಂದು ಆರೋಪಿಸಿದ್ದಾರೆ. ನಾನೀಗ ಸಂಸದ ಪ್ರತಾಪ್ ಸಿಂಹಗೆ ಚಾಲೆಂಜ್ ಮಾಡುತ್ತೇನೆ. ಕಲಾಮಂದಿರದಲ್ಲಿ ಈ ಬಗ್ಗೆ ಚರ್ಚೆ ಮಾಡುವುದಕ್ಕೆ ಬರಲಿ. ಅವರ ಮೇಲಿನ ಆರೋಪ ನಾನು ಸಾಬೀತು ಮಾಡುತ್ತೇನೆ. ಸಾಬೀತು ಮಾಡದಿದ್ದರೆ ನಾನು ಅಲ್ಲೇ ನೇಣುಹಾಕಿಕೊಳ್ತೇನೆ ಎಂದು ಪ್ರತಾಪ್ ಸಿಂಹಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ ಚಾಲೆಂಜ್ ಮಾಡಿದ್ದಾರೆ. ಪ್ರತಾಪ್ ಸಿಂಹ ಸಂಸದರಾಗಲು ಅನ್‌ಫಿಟ್ ರೋಲ್‌ ಕಾಲ್‌ ದಂಧೆ ಮಾಡುತ್ತಿರುವುದು ಪ್ರತಾಪ್ ಸಿಂಹ. ಸಂಸದರ ನಿಧಿಯಲ್ಲಿ ಶೇ.10ರಷ್ಟು ಕಮಿಷನ್ ಪಡೀತಿದ್ದಾರೆ. ಪ್ರತಾಪ್ ಸಿಂಹ ಕಡೆಯವರದ್ದೇ ಒಂದು ಏಜೆನ್ಸಿ ಮಾಡಿದ್ದಾರೆ. ಅಲ್ಲದೆ ಇವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ. ಪ್ರತಾಪ್‌ ಸಿಂಹ ಸಂಸದ ಆಗಲು ಅನ್‌ಫಿಟ್. ಅವರು ಬ್ಲೂ ಫಿಲಂ ಹೀರೋ ಆಗಲು ಲಾಯಕ್‌ ಇದ್ದಾರೆ. ಕಳೆದ ಲೋಕಸಭೆ ಚುನಾವಣೆಯ ವೇಳೆ ಪ್ರತಾಪ್ ಸಿಂಹ ಮಾತಾಡಿದ್ದ ಅಶ್ಲೀಲ ಆಡಿಯೋ ಬಿಡುಗಡೆಯಾಗಿತ್ತು. ಪ್ರತಾಪ್ ಸಿಂಹ ವಿರುದ್ಧ ಆರೋಪ ಮಾಡಿದ್ದ ಹುಡುಗಿ ಎಲ್ಲಿ? ಚುನಾವಣೆ ವೇಳೆ ಕಾಲುಹಿಡಿದು ರಾಜಿ ಮಾಡಿಕೊಂಡಿದ್ದೀರಾ? ಆಕೆಯನ್ನು ಕೊಲೆ ಮಾಡಿಸಿಬಿಟ್ರಾ ಹೇಳಿ? ಎಂದು ಸಂಸದ ಪ್ರತಾಪ್ ಸಿಂಹಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಪ್ರಶ್ನಿಸಿದ್ದಾರೆ.

ನನ್ನ ಆತ್ಮಹತ್ಯೆಗೆ ಪ್ರತಾಪ್ ಸಿಂಹ ಕಾರಣವಲ್ಲ ನನ್ನ ಆತ್ಮಹತ್ಯೆಗೆ ಪ್ರತಾಪ್ ಸಿಂಹ ಕಾರಣವಲ್ಲ. ಹೀಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಆದರೆ ನೀವು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂತಾ ಲಕ್ಷ್ಮಣ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಂಸದನಾಗುವುದಕ್ಕೂ ಮುನ್ನ ಏನು ಮಾಡುತ್ತಿದ್ದೆ. ಹೆಣ್ಣು ಮಕ್ಕಳನ್ನ ಹಾಳು ಮಾಡಿರುವ ಬಗ್ಗೆ ದಾಖಲೆ ಇದೆ ಎಂದು ಪ್ರತಾಪ್ ಸಿಂಹ ವಿರುದ್ಧ ಎಂ.ಲಕ್ಷ್ಮಣ ಆರೋಪಿಸಿದ್ದಾರೆ. ಈ ದಾಖಲೆಗಳನ್ನು ನಾನು ನ್ಯಾಯಾಲಯಕ್ಕೆ ಕೊಡುತ್ತೇನೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು