AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ; ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ

Disha Ravi: ದಿಶಾ ರವಿ ರೈತ ಕುಟುಂಬದಿಂದ ಬಂದವರು. ರೈತರ ಬೆಂಬಲ ಸೂಚಿಸಿದ್ದೆ ಇವರಿಗೆ ತೊಂದರೆಯಾಗಿದೆ. ಆ ಕಾರಣಕ್ಕಾಗಿ ಇವರನ್ನ ಬಂಧಿಸಿದ್ದಾರೆ. ಯುವಕ, ಯುವತಿಯರು ಬಿಜೆಪಿ ವಿರುದ್ದ ಧ್ವನಿ ಎತ್ತಬೇಕು. ಮೊದಲು ಬಿಜೆಪಿಯವರ ಐಟಿ ಸೆಲ್, ಅರ್​ಎಸ್​ಎಸ್​ನ ಬ್ಯಾನ್ ಮಾಡಿ ಎಂದು ಹೇಳಿದರು.

ಬಿಜೆಪಿಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ; ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ
ಎಂ.ಲಕ್ಷ್ಮಣ್, ಕೆಪಿಸಿಸಿ ವಕ್ತಾರ
sandhya thejappa
sandhya thejappa|

Updated on: Feb 16, 2021 | 4:15 PM

Share

ಮೈಸೂರು: ಮೋದಿ ಬಂದ ಬಳಿಕ 800 ದೇಶದ್ರೋಹದ ಪ್ರಕರಣಗಳು ಹುಟ್ಟಿಕೊಂಡಿವೆ ಎಂದು ಹೇಳಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದಿಶಾರನ್ನು ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಸರ್ಕಾರದ ವಿರುದ್ಧ ಮಾತಾನಾಡುವವರೆಲ್ಲಾ ದೇಶದ್ರೋಹಿಗಳಾ? ಎಂದು ಪ್ರಶ್ನಿಸಿ ಇದಕ್ಕೆ ಮತ್ತೊಂದು ಉದಾಹರಣೆ ದಿಶಾ ರವಿ ಬಂಧನ ಎಂದರು. ದಿಶಾರನ್ನು ಬೆಂಗಳೂರು ಪೊಲೀಸರ ಅನುಮತಿ ಪಡೆಯದೆ ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ರೈತರಿಗೆ ಬೆಂಬಲ ಸೂಚಿಸಿದ್ದೆ ಇವರಿಗೆ ತೊಂದರೆಯಾಗಿದೆ. ಟೂಲ್ ಕಿಟ್ ಎಂಬ ಹೊಸ ಪದ ಬಳಕೆ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಿ ಹೆಣ್ಣು ಮಗಳನ್ನ ಬಂಧಿಸಿದ್ದಾರೆ. ಬಿಜೆಪಿಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ ಎಂದು ಹೇಳಿದರು.

ದಿಶಾ ರವಿ ರೈತ ಕುಟುಂಬದಿಂದ ಬಂದವರು. ರೈತರ ಬೆಂಬಲ ಸೂಚಿಸಿದ್ದೆ ಇವರಿಗೆ ತೊಂದರೆಯಾಗಿದೆ. ಆ ಕಾರಣಕ್ಕಾಗಿ ಇವರನ್ನ ಬಂಧಿಸಿದ್ದಾರೆ. ಯುವಕ, ಯುವತಿಯರು ಬಿಜೆಪಿ ವಿರುದ್ದ ಧ್ವನಿ ಎತ್ತಬೇಕು. ಮೊದಲು ಬಿಜೆಪಿಯವರ ಐಟಿ ಸೆಲ್, ಅರ್​ಎಸ್​ಎಸ್​ನ ಬ್ಯಾನ್ ಮಾಡಿ ಎಂದು ಹೇಳಿದರು.

ಕಾರ್ಯಪ್ಪ ವಿರುದ್ಧ ವಾಗ್ದಾಳಿ ಉಚಿತ ನಾಟಕ ತೋರಿಸುವುದು ಸಿದ್ದರಾಮಯ್ಯ ಉಚಿತ ಅಕ್ಕಿ ಕೊಟ್ಟಂತೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎಂ.ಲಕ್ಷ್ಮಣ ಬಿಜೆಪಿಯವರು ಬಡವರು ತಿನ್ನುವ ಅನ್ನಕ್ಕೂ ಕೇಸರಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ. ನೀವು ಅಕ್ಕಿ ಬೆಳೆಯುವವರನ್ನು ಸಹಿಸಲ್ಲ ಉಚಿತ ಅಕ್ಕಿ ಕೊಡುವವರನ್ನು ಸಹಿಸಲ್ಲ. ಕಾರ್ಯಪ್ಪ ನಿಮ್ಮ ವ್ಯಾಪ್ತಿಯಲ್ಲಿ ಏನಿದೆ ಅದನ್ನು ಮಾತ್ರ ಮಾಡಿ. ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ. ಸಿದ್ದರಾಮಯ್ಯ ತಂದ ಅನ್ನಭಾಗ್ಯ ಯೋಜನೆಯಿಂದ ಒಂದುವರೆ ಕೋಟಿ ಜನ ಹೊಟ್ಟೆ ತುಂಬಿಸಿಕೊಂಡಿದ್ದಾರೆ. ಆದರೆ ಮೋದಿ ಮಾಡಿದ ಲಾಕ್​ಡೌನ್​ ಸಂದರ್ಭದಲ್ಲಿ ಹಸಿವಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಬಡವರ ಬಗ್ಗೆ ಟೀಕಿಸಿ ಸಂತೋಷ ಪಡುವ ಕೊಳಕು ಮನಸ್ಥಿತಿ ನಿಮ್ಮದು ಎಂದು ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಯಾರಾದರು ಟಿವಿ ಇಲ್ಲದವರ ಮನೆ ತೋರಿಸಿ. ಈ ಕಾನೂನು ತಂದರೆ ಯಾವೊಬ್ಬನಿಗೂ ಬಿಪಿಎಲ್ ಕಾರ್ಡ್ ಇರಲ್ಲ. ಈ ಹಿಂದೆ ನಮ್ಮ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ರ್​ಎಸ್​ಎಸ್​ನವರು ಜನರನ್ನು ಬೀದಿಗಿಳಿಸಿದ್ದರು. ಈಗ ಇಷ್ಟೆಲ್ಲ ಸಮಸ್ಯೆಯಿಂದ ಜನ ಹೊಡೆಸಿಕೊಳ್ಳುತ್ತಿದ್ದರು ಯಾರು ಸಹ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಜನ ಈ ವಿಚಾರವಾಗಿ ಎಚ್ಚರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕರ್ನಾಟಕದಲ್ಲಿ 20ರಂದು ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ; ಹಳ್ಳಿಗಳಿಗೆ ಡಿಸಿ, ಎಸಿ, ತಹಶೀಲ್ದಾರ್ ಭೇಟಿ: ಆರ್​.ಅಶೋಕ ಘೋಷಣೆ

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!