AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನು ಹೀಗೆ ಅಂದ್ಬಿಟ್ರು ರೇಣುಕಾಚಾರ್ಯ? ವಲಸೆ ಬಂದು ಸಚಿವರಾದವರಿಗೆ ಭರ್ಜರಿ ಟಾಂಗ್

ಬಿಜೆಪಿ ಸೇರಿದ 17 ಶಾಸಕರ ಕೊಡುಗೆಯನ್ನು ಗೌರವಿಸುತ್ತೇವೆ. ಆದರೆ ನಾವು 105 ಮಂದಿ ಗೆದ್ದಿರಲಿಲ್ಲ ಎಂದರೆ ಹೇಗೆ ಸರ್ಕಾರ ರಚನೆ ಸಾಧ್ಯವಾಗುತ್ತಿತ್ತು? ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ಇದೇನು ಹೀಗೆ ಅಂದ್ಬಿಟ್ರು ರೇಣುಕಾಚಾರ್ಯ? ವಲಸೆ ಬಂದು ಸಚಿವರಾದವರಿಗೆ ಭರ್ಜರಿ ಟಾಂಗ್
ಶಾಸಕ M.P.ರೇಣುಕಾಚಾರ್ಯ
Lakshmi Hegde
| Edited By: |

Updated on:Dec 09, 2020 | 2:10 PM

Share

ಬೆಂಗಳೂರು: ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವವರಿಗೆ ಎಂ.ಪಿ.ರೇಣುಕಾಚಾರ್ಯ ಭರ್ಜರಿ ಟಾಂಗ್ ನೀಡಿದ್ದಾರೆ. ಬಿಜೆಪಿಯ 105 ಶಾಸಕರು ಗೆದ್ದಿದ್ದಕ್ಕೆ, ಪಕ್ಷದ ಕಾರ್ಯಕರ್ತರ ಶ್ರಮದಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಹೊರತು ಯಾರೊಬ್ಬರಿಂದಲೂ ಅಲ್ಲ ಎಂದು ಹೇಳುವ ಮೂಲಕ ರಮೇಶ್​ ಜಾರಕಿ ಹೊಳಿ, ಸಿ.ಪಿ.ಯೋಗೀಶ್ವರ್​ ಮತ್ತಿತರರಿಗೆ ಟಾಂಗ್​ ನೀಡಿದ್ದಾರೆ.

ಯಡಿಯೂರಪ್ಪ, ಪ್ರಧಾನಿ ಮೋದಿ, ಅಮಿತ್​ ಷಾ ಸೇರಿ ಎಲ್ಲ ಮುಖಂಡರು, ಕಾರ್ಯಕರ್ತರ ಶ್ರಮ, ತ್ಯಾಗದಿಂದ ಪಕ್ಷ ಗಟ್ಟಿಗೊಂಡಿದೆ. ಇದನ್ನು ಯಾರೂ ಮರೆಯಬಾರದು. ಬಿಜೆಪಿ ಸೇರಿದ 17 ಶಾಸಕರ ಕೊಡುಗೆಯನ್ನು ಗೌರವಿಸುತ್ತೇವೆ. ಆದರೆ ನಾವು 105 ಮಂದಿ ಗೆದ್ದಿರಲಿಲ್ಲ ಎಂದರೆ ಹೇಗೆ ಸರ್ಕಾರ ರಚನೆ ಸಾಧ್ಯವಾಗುತ್ತಿತ್ತು? ತನ್ನೊಬ್ಬನಿಂದಲೇ ಈ ಸರ್ಕಾರ ಬಂತು ಎಂದು ಭಾವಿಸಿದವರಿಗೆ ನಾನು ಈ ಮಾತನ್ನು ಹೇಳಲು ಇಚ್ಛಿಸುತ್ತೇನೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ 17 ಶಾಸಕರು ಮೈತ್ರಿ ಸರ್ಕಾರದಿಂದ ಹೊರನಡೆದು ಬಿಜೆಪಿ ಸೇರಿದ್ದರು. ಅದರ ನಾಯಕತ್ವ ರಮೇಶ್ ಜಾರಕಿಹೊಳಿಯವರದ್ದು ಎಂದಾಗಿತ್ತು. ಈಗಲೂ ಸಹ ಅವರು ಬಿಎಸ್​ವೈ ಮೇಲೆ ಒತ್ತಡ ಹೇರುತ್ತಿದ್ದು, ವಲಸೆ ಬಂದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡಬೇಕೆಂದು ಹೇಳುತ್ತಿದ್ದಾರೆ. ಈ ಮಧ್ಯೆ ರೇಣುಕಾಚಾರ್ಯ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ನಾಳೆ ರಸ್ತೆಗಿಳಿಯೋದಿಲ್ವಂತೆ ಓಲಾ, ಊಬರ್, ಆಟೋ, ಟ್ಯಾಕ್ಸಿ

Published On - 1:13 pm, Wed, 25 November 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?