AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಗೆ ಹೆರಿಗೆ ಮಾಡಿಸಿ ಮಗು ಸೇಲ್ ಮಾಡಿದ ವೈದ್ಯ ದಂಪತಿ ವಿರುದ್ಧ ಪೋಕ್ಸೋ ಕೇಸ್

ಮಡಿಕೇರಿ: ವೈದ್ಯೋ ನಾರಾಯಣ ಹರಿ ಅನ್ನೋದು ಹಳೇ ಮಾತು. ಆದ್ರಿಲ್ಲಿ ಸರ್ಕಾರಿ ವೈದ್ಯರಾಗಿ ಜೇಬುತುಂಬಾ ಸಂಬಳ ಬಂದ್ರು ದಂಪತಿ ಮಾಡಿರೋ ಕೆಲ್ಸ ಮಣ್ಣು ತಿನ್ನುವಂತದ್ದು. ವೈದ್ಯ ವೃತ್ತಿಗೆ ಕಳಂಕವಾದ ಇವರು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೆರಿಗೆ ಮಾಡಿಸಿ ಮಗುವನ್ನ ಲಕ್ಷ ಲಕ್ಷಕ್ಕೆ ಮಾರಾಟ ಮಾಡಿ ಎಸ್ಕೇಪ್ ಆಗಿದ್ದಾರೆ. ಕಾಸಿನ ಆಸೆಗೆ ಅಡ್ಡದಾರಿ ಹಿಡಿದ್ರು! ಅಂದಹಾಗೆ ಡಾ.ರಾಜೇಶ್ವರಿ ಮತ್ತು ಡಾ.ನವೀನ್ ಎಂಬ ದಂಪತಿ ಹೊಸ ಬಡಾವಣೆಯ ನಿವಾಸಿಗಳು. ರಾಜೇಶ್ವರಿ ಹಾಗೂ ಡಾಕ್ಟರ್ ನವೀನ್ ಹಲವು ವರ್ಷದಿಂದ ಮಡಿಕೇರಿಯ ಜಿಲ್ಲಾ […]

ಅಪ್ರಾಪ್ತೆಗೆ ಹೆರಿಗೆ ಮಾಡಿಸಿ ಮಗು ಸೇಲ್ ಮಾಡಿದ ವೈದ್ಯ ದಂಪತಿ ವಿರುದ್ಧ ಪೋಕ್ಸೋ ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 09, 2020 | 11:58 AM

Share

ಮಡಿಕೇರಿ: ವೈದ್ಯೋ ನಾರಾಯಣ ಹರಿ ಅನ್ನೋದು ಹಳೇ ಮಾತು. ಆದ್ರಿಲ್ಲಿ ಸರ್ಕಾರಿ ವೈದ್ಯರಾಗಿ ಜೇಬುತುಂಬಾ ಸಂಬಳ ಬಂದ್ರು ದಂಪತಿ ಮಾಡಿರೋ ಕೆಲ್ಸ ಮಣ್ಣು ತಿನ್ನುವಂತದ್ದು. ವೈದ್ಯ ವೃತ್ತಿಗೆ ಕಳಂಕವಾದ ಇವರು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೆರಿಗೆ ಮಾಡಿಸಿ ಮಗುವನ್ನ ಲಕ್ಷ ಲಕ್ಷಕ್ಕೆ ಮಾರಾಟ ಮಾಡಿ ಎಸ್ಕೇಪ್ ಆಗಿದ್ದಾರೆ.

ಕಾಸಿನ ಆಸೆಗೆ ಅಡ್ಡದಾರಿ ಹಿಡಿದ್ರು! ಅಂದಹಾಗೆ ಡಾ.ರಾಜೇಶ್ವರಿ ಮತ್ತು ಡಾ.ನವೀನ್ ಎಂಬ ದಂಪತಿ ಹೊಸ ಬಡಾವಣೆಯ ನಿವಾಸಿಗಳು. ರಾಜೇಶ್ವರಿ ಹಾಗೂ ಡಾಕ್ಟರ್ ನವೀನ್ ಹಲವು ವರ್ಷದಿಂದ ಮಡಿಕೇರಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡ್ತಿದ್ರು. 2019 ರ ಆಗಸ್ಟ್ 22 ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಅಂತಾ ಬಂದಿದ್ದಾಳೆ.

ಇದನ್ನೇ ಬಂಡವಾಳ ಮಾಡಿಕೊಂಡ ರಾಜೇಶ್ವರಿ ತನ್ನ ಪತಿಯೊಂದಿಗೆ ಸೇರಿ ಆಕೆಯನ್ನು ಮಡಿಕೇರಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದ್ದು, ಮಗುವನ್ನು ಅದೇ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿರೋ ಸೆಲಿನಾ ಮಗನಾದ ರಾಬಿನ್‌ಗೆ 1.50 ಲಕ್ಷಕ್ಕೆ ಮಾರಿದ್ದಾಳೆ. ಸಾಲದು ಎಂಬಂತೆ ಇದು ರಾಬಿನ್ ಮಗು ಅಂತಾ ಆಸ್ಪತ್ರೆಯಿಂದಲೇ ನಕಲಿ ಡಾಕ್ಯುಮೆಂಟ್ ಕೂಡ ಸೃಷ್ಟಿ ಮಾಡಿದ್ದಾರೆ.

ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅರುಂಧತಿ ಮಡಿಕೇರಿ ನಗರ ಠಾಣೆಯಲ್ಲಿ ಘಟನೆಯ ಕುರಿತು ಕೇಸ್ ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿರುವ ಪೊಲೀಸರು ಡಿಸೆಂಬರ್ 27 ರಂದು ಸೆಲೆನಾ ಮನೆಗೆ ಹೋಗಿ ಪರಿಶೀಲಿಸಿದಾಗ 4 ತಿಂಗಳ ಗಂಡು ಮಗು ಪತ್ತೆಯಾಗಿದೆ.

ಮಗುವಿನ ತಾಯಿ ನನಗೆ ಮಗು ಬೇಡಾ ಎಂದು ಆ ಕ್ಷಣ ಸುಳ್ಳು ಹೇಳಿದ್ದ ಕಿರಾತಕರು, ಮಗು ರಾಬೀನ್ ಸೊಸೆ ಸರಳಾ ಮೇರಿಗೆ ಜನಿಸಿದೆ ಎಂದು ನಕಲಿ ಪ್ರಮಾಣ ಪತ್ರವನ್ನೂ ಸೃಷ್ಟಿಸಿದ್ದರೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ವೈದ್ಯ ದಂಪತಿ ಈಗ ಎಸ್ಕೇಪ್ ಆಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Published On - 11:52 am, Thu, 9 January 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು