AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಶಿವನಿಗೆ ಬಂಗಾರದ ಮೂರ್ತಿ, ಬಾಗಲಕೋಟೆಯಲ್ಲಿ ಮುಸ್ಲಿಮರ ಕೈಯಲ್ಲಿ ಅರಳಿದ ಹರ

ಮೈಸೂರು: ಶಿವರಾತ್ರಿಯ ಶುಭಘಳಿಗೆ.. ದೇಗುಲದಲ್ಲಿ ಶಿವನಾಮಸ್ಮರಣೆ. ಎಲ್ಲೆಲ್ಲೂ ಭಕ್ತರ ಝೇಂಕಾರ. ಹರನಿಗೆ ಪೂಜೆ ಪುನಸ್ಕಾರ. ಬಂಗಾರದ ಮೂರ್ತಿಗೆ ಹೂವಿನ ಅಲಂಕಾರ. ಈ ವಿಶೇಷ ದಿನದಂದು ಈಶ್ವರನ ದ್ಯಾನ ಮಾಡೋದೇ ಒಂದು ಸೌಭಾಗ್ಯ. ಇವತ್ತು ನಾಡಿನೆಲ್ಲೆಡೆ ಶಿವರಾತ್ರಿ ಸಡಗರ. ಭಕ್ತರೆಲ್ಲ ಶಿವನಾಮಸ್ಮರಣೆಯಲ್ಲಿ ಮುಳುಗುತ್ತಾರೆ. ಅದ್ರಲ್ಲೂ ಮೈಸೂರಿನ ಅರಮನೆಯಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲಿ ಚಿನ್ನದ ಮೂರ್ತಿಯ ದರ್ಶನ ಪಡೆಯೋದೇ ಒಂದು ಅದೃಷ್ಟ. ಯಾಕಂದ್ರೆ, 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಮೈಸೂರು ಅರಸು ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆಯಾಗಿ ನೀಡಿದ್ದರು. ಇದು […]

ಮೈಸೂರಲ್ಲಿ ಶಿವನಿಗೆ ಬಂಗಾರದ ಮೂರ್ತಿ, ಬಾಗಲಕೋಟೆಯಲ್ಲಿ ಮುಸ್ಲಿಮರ ಕೈಯಲ್ಲಿ ಅರಳಿದ ಹರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 21, 2020 | 7:57 AM

Share

ಮೈಸೂರು: ಶಿವರಾತ್ರಿಯ ಶುಭಘಳಿಗೆ.. ದೇಗುಲದಲ್ಲಿ ಶಿವನಾಮಸ್ಮರಣೆ. ಎಲ್ಲೆಲ್ಲೂ ಭಕ್ತರ ಝೇಂಕಾರ. ಹರನಿಗೆ ಪೂಜೆ ಪುನಸ್ಕಾರ. ಬಂಗಾರದ ಮೂರ್ತಿಗೆ ಹೂವಿನ ಅಲಂಕಾರ. ಈ ವಿಶೇಷ ದಿನದಂದು ಈಶ್ವರನ ದ್ಯಾನ ಮಾಡೋದೇ ಒಂದು ಸೌಭಾಗ್ಯ.

ಇವತ್ತು ನಾಡಿನೆಲ್ಲೆಡೆ ಶಿವರಾತ್ರಿ ಸಡಗರ. ಭಕ್ತರೆಲ್ಲ ಶಿವನಾಮಸ್ಮರಣೆಯಲ್ಲಿ ಮುಳುಗುತ್ತಾರೆ. ಅದ್ರಲ್ಲೂ ಮೈಸೂರಿನ ಅರಮನೆಯಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲಿ ಚಿನ್ನದ ಮೂರ್ತಿಯ ದರ್ಶನ ಪಡೆಯೋದೇ ಒಂದು ಅದೃಷ್ಟ. ಯಾಕಂದ್ರೆ, 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಮೈಸೂರು ಅರಸು ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆಯಾಗಿ ನೀಡಿದ್ದರು. ಇದು ವರ್ಷವಿಡೀ ಮುಜರಾಯಿ ಇಲಾಖೆ ವಶದಲ್ಲಿರುತ್ತೆ. ಶಿವರಾತ್ರಿ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ತರಲಾಯ್ತು. ನಂತರ ದೇವಸ್ಥಾನದ ಆಡಳಿತ ಮಂಡಳಿ ವಶಕ್ಕೆ ನೀಡಲಾಯ್ತು.

ಬಳಿಕ ಚಿನ್ನದ ಶಿವನ ಮುಖವಾಡಕ್ಕೆ ಗಂಗೆಯನ್ನು ಜೋಡಿಸಲಾಗುತ್ತದೆ. ಜೊತೆಗೆ ಬೆಳ್ಳಿ ಲೇಪಿತ ಅರ್ಧ ಚಂದ್ರನನ್ನು ಪ್ರತಿಷ್ಠಾಪಿಸಲಾಗುತ್ತೆ. ಬೆಳಗ್ಗೆ ಶಿವಲಿಂಗಕ್ಕೆ ವಿವಿಧ ಅಭಿಷೇಕಗಳನ್ನು ಮಾಡಿ, ನಂತರ ಈ ಮುಖವಾಡವನ್ನು ಶಿವಲಿಂಗಕ್ಕೆ ತೊಡಿಸಲಾಗುತ್ತೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ಕೊಡೋ ಈ ಅಪರೂಪದ ಶಿವನನ್ನು ನೋಡಲು ಈ ದಿನ ಭಕ್ತ ಸಾಗರವೇ ಹರಿದು ಬರುತ್ತೆ.

ಇಲ್ಲಿ ಚಿನ್ನದ ಮುಖವಾಡದಲ್ಲಿ ಶಿವ ದರ್ಶನ ಕೊಡ್ತಿದ್ರೆ, ಬಾಗಲಕೋಟೆಯಲ್ಲಿ ಮುಸ್ಲಿಂರ ಕೈಯಲ್ಲಿ ಪರಮೇಶ್ವರ ಜನ್ಮ ತಾಳುತ್ತಿದ್ದಾನೆ. ಬೀಳಗಿ ತಾಲೂಕಿನ ಕೊಪ್ಪ ಎಸ್.ಕೆ. ಗ್ರಾಮದ ಅಬ್ದುಲ್ ರಜಾಕ್ ಕುಟುಂಬ 3 ತಲೆಮಾರುಗಳಿಂದ ಶಿವನ ಮೂರ್ತಿ ತಯಾರಿಸುತ್ತಿದೆ. ವಿಶೇಷ ಅಂದ್ರೆ, ತಮ್ಮ ಊರಿನ ಪಕ್ಕದ ಗುಡ್ಡದಲ್ಲಿನ ಕಲ್ಲಿನಿಂದ ಈ ಶಿವಪೀಠಕಗಳನ್ನು ತಯಾರಿಸ್ತಾರೆ.

ಇವು ಕಪ್ಪು ಬಣ್ಣದ ಲಿಂಗುವಿನೊಳಗೆ ಇರುತ್ತವೆ. ಸಾದಾಲಿಂಗ, ಜ್ಯೋತಿರ್ಲಿಂಗ, ಪಂಚಸೂತ್ರ ಅನ್ನೋ 3 ವಿಧದ ಶಿವಲಿಂಗಪೀಠಕ ತಯಾರಿಸುತ್ತಿದ್ದಾರೆ. ವರ್ಷಕ್ಕೆ ಎರಡೂವರೆ ಲಕ್ಷ ಶಿವಪೀಠಕಗಳನ್ನು ರೆಡಿ ಮಾಡ್ತಿದ್ದು, ಶಿವರಾತ್ರಿ ವೇಳೆ ಇವುಗಳಿಗೆ ಭಾರಿ ಬೇಡಿಕೆ ಬರುತ್ತಂತೆ. ಒಟ್ನಲ್ಲಿ, ಇವತ್ತು ಶಿವರಾತ್ರಿ. ಎಲ್ಲೆಲ್ಲೂ ಶಿವನಾಮ ಸ್ಮರಣೆ ಮೊಳಗುತ್ತಿದೆ. ಭಕ್ತರೆಲ್ಲಾ ಪರಮೇಶ್ವರನ ಆರಾಧನೆಯಲ್ಲಿ ತಲ್ಲೀನರಾಗಿದ್ದಾರೆ.

Published On - 7:53 am, Fri, 21 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​