ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..
ಬೆಂಗಳೂರು: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಖೆಡ್ಡಾಗೆ ಕೆಡವುತ್ತಿದ್ದ ಗ್ಯಾಂಗ್ನ ಏಳು ಆರೋಪಿಗಳನ್ನು ಮಹದೇವ ಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಪೈ ಲೇಔಟ್ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮಾಡಿಕೊಂಡಿದ್ದರು. ಈ ಸ್ಥಳಕ್ಕೆ ಶ್ರೀಮಂತ ವ್ಯಕ್ತಿಗಳನ್ನು ಕರೆಸಿ ಹನಿಟ್ರ್ಯಾಪ್ ಮಾಡ್ತಿದ್ದರು. ಶ್ರೀಮಂತರ ವ್ಯಕ್ತಿಯ ಜತೆ ಯುವತಿ ಇರುವಾಗ ಯುವತಿ ಪತಿ ಹಾಗೂ […]

ಬೆಂಗಳೂರು: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಖೆಡ್ಡಾಗೆ ಕೆಡವುತ್ತಿದ್ದ ಗ್ಯಾಂಗ್ನ ಏಳು ಆರೋಪಿಗಳನ್ನು ಮಹದೇವ ಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಆರೋಪಿಗಳು.
ಈ ಗ್ಯಾಂಗ್ ಪೈ ಲೇಔಟ್ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮಾಡಿಕೊಂಡಿದ್ದರು. ಈ ಸ್ಥಳಕ್ಕೆ ಶ್ರೀಮಂತ ವ್ಯಕ್ತಿಗಳನ್ನು ಕರೆಸಿ ಹನಿಟ್ರ್ಯಾಪ್ ಮಾಡ್ತಿದ್ದರು. ಶ್ರೀಮಂತರ ವ್ಯಕ್ತಿಯ ಜತೆ ಯುವತಿ ಇರುವಾಗ ಯುವತಿ ಪತಿ ಹಾಗೂ ಸ್ನೇಹಿತರಂತೆ ಮನೆಗೆ ನುಗ್ಗಿ ಹೈಡ್ರಾಮ ಮಾಡಿ ಮೊಬೈಲ್ನಲ್ಲಿ ವಿಡಿಯೋ ಮಾಡ್ತಿದ್ರು. ವಿಡಿಯೋ ಇಟ್ಕೊಂಡು ಬೆದರಿಕೆ ಹಾಕುತಿದ್ರು.
ಮಾನವ ಹಕ್ಕುಗಳ ಹೆಸರಿನಲ್ಲಿ ಈ ವಿಷಯ ಹೊರಗೆ ಬಾಯ್ಬಿಟ್ಟರೆ, ವಿಡಿಯೋ ರಿಲೀಸ್ ಮಾಡ್ತೀವಿ. ಇಲ್ಲ ನಿನ್ನ ಪ್ರಾಣ ಇರಲ್ಲ ಎಂದು ಜೀವ ಬೆದರಿಕೆ ಹಾಕಿ ಮಾರಕಾಸ್ತ್ರಗಳ ಮೂಲಕ ಹಲ್ಲೆ ನಡೆಸಿ ಚಿನ್ನಾಭರಣ, ಹಣ ಕಸಿದುಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪಿಗಳ ವಿರುದ್ಧ ಮಹದೇವಪುರ ಠಾಣೆಯಲ್ಲಿ FIR ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.