ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. […]

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: Jan 30, 2020 | 12:40 PM

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಾರಿನಲ್ಲಿ ಬಂದಿದ್ದ ಮಹಿಳೆ, ರಾತ್ರಿಯಾಗುತ್ತಿದ್ದಂತೆ ಕಾರ್ ಲಾಕ್ ಮಾಡಿ ಮಲಗಿದ್ದರು. ಕಾರಿನ ಹಿಂದಿನ ಸೀಟಲ್ಲಿ ಗಾಢ ನಿದ್ರೆಗೆ ಜಾರಿದ್ದರು. ಹೆಚ್ಚಿನ ವಿವರ ಮಹಿಳೆಯ ಚೇತರಿಕೆ ಬಳಿಕಬಷ್ಟೇ ತಿಳಿದು ಬರಬೇಕಿದೆ.

Published On - 12:39 pm, Thu, 30 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us