Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ

ಬೆಳಗಾವಿಯಲ್ಲಿದ್ದಿದ್ದು ಎಂಇಎಸ್ ತಾಕತ್ ಅಲ್ಲ, ಮರಾಠಿಗರ ತಾಕತ್ತು. ಮೊದಲು ಬೆಳಗಾವಿಯಲ್ಲಿ ಐದಾರು ಶಾಸಕರು ಆಯ್ಕೆ ಆಗಿ ಬರುತ್ತಿದ್ದರು. ನಿಮ್ಮ ಕಾಲಿನ ಮೇಲೆ ನೀವೆ ಕಲ್ಲು ಬೀಳಿಸಿಕೊಂಡಿದ್ದೀರಿ ಎಂದು ಹೇಳುವ ಮೂಲಕ ಬೆಳಗಾವಿ ಎಂಇಎಸ್ ನಾಯಕರನ್ನುದ್ದೇಶಿಸಿ ಮಾತಾಡಿ ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಉದ್ಧವ್ ಠಾಕ್ರೆ ಮಾಡಿದ್ದಾರೆ.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ - ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ
ಉದ್ಧವ್ ಠಾಕ್ರೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 27, 2021 | 2:44 PM

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಉದ್ಧಟತನ ತೋರಿದ್ದಾರೆ. ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ. ಮರಾಠ ಭಾಷಿಕರ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ. ಅಲ್ಲಿಯವರೆಗೂ ನಾನು ಸುಮ್ಮನೆ ಕೂರುವುದಿಲ್ಲವೆಂದು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ನುಡಿದಿದ್ದಾರೆ.

ಇಂದು ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಹೆಸರಿನ ಮರಾಠಿ ಪುಸ್ತಕವನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನ ಮಲಬಾರ್ ಹಿಲ್‌ನಲ್ಲಿರುವ ಸಹ್ಯಾದ್ರಿ ರಾಜ್ಯ ಅತಿಥಿ ಗೃಹದಲ್ಲಿ ಬಿಡುಗಡೆ ಮಾಡಿದ್ರು. ಈ ಪುಸ್ತಕವು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಬರದಿರುವ ಪುಸ್ತಕ. ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ. ಮರಾಠ ಭಾಷಿಕರ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ. ಅಲ್ಲಿಯವರೆಗೂ ನಾನು ಸುಮ್ಮನೆ ಕೂರುವುದಿಲ್ಲವೆಂದು ಉದ್ಧಟತನ ತೋರಿದ್ದಾರೆ.

ಮತ್ತೆ ಮಾತನಾಡಿದ ಠಾಕ್ರೆ.. ಬೆಳಗಾವಿಯನ್ನು ಕರ್ನಾಟಕ ವ್ಯಾಪ್ತಿ ಮಹಾರಾಷ್ಟ್ರ ಎಂದು ಮತ್ತೆ ಪುನರುಚ್ಚರಿಸಿದ್ರು. ನಾವು ನ್ಯಾಯಾಂಗ ನಿಂದನೆ ಮಾಡ್ತಿಲ್ಲ, ಕರ್ನಾಟಕ ಸರ್ಕಾರ ಮಾಡ್ತಿದೆ. ಬೆಳಗಾವನ್ನು ‘ಬೆಳಗಾವಿ’ ಎಂದು ಮರುನಾಮಕರಣ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿಸಿ ಅಧಿವೇಶನ ನಡೆಸುತ್ತಿದ್ದಾರೆ. ಬೆಳಗಾವಿ ಎರಡನೇ ರಾಜಧಾನಿ ಅಂತಾ ಘೋಷಿಸಿದ್ದಾರೆ ಇದು ನ್ಯಾಯಾಂಗ ನಿಂದನೆ ಅಲ್ವಾ? ಕರ್ನಾಟಕ ಸರ್ಕಾರ ಕಾನೂನು ಪಾಲನೆ ಮಾಡ್ತಿಲ್ಲ. ಕರ್ನಾಟಕ ಸರ್ಕಾರ ಮರಾಠಿಗರ ಮೇಲೆ ನಿರಂತರ ದೌರ್ಜನ್ಯ ಮಾಡುತ್ತಿದೆ. ಅಲ್ಲಿಯ ಮರಾಠಿಗರು ಮರಾಠಿ ಶಾಲೆ ಸ್ಥಾಪಿಸಿ ಅಂತಾರೆ ಆದ್ರೆ ಅದರ ಅವಶ್ಯಕತೆ ಇಲ್ಲ. ಬೆಳಗಾಂನ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಯೇ ತೀರುತ್ತೇವೆ ಎಂದು ಬಹಿರಂಗವಾಗಿ ವಿವಾದ ಹುಟ್ಟಿಸುವಂತ ಮಾತುಗಳನ್ನು ಠಾಕ್ರೆಯಾಡಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಒಡೆದಿದ್ದು ಹೇಗೆ? ಬೆಳಗಾವಿಯಲ್ಲಿದ್ದಿದ್ದು ಎಂಇಎಸ್ ತಾಕತ್ ಅಲ್ಲ, ಮರಾಠಿಗರ ತಾಕತ್ತು. ಮೊದಲು ಬೆಳಗಾವಿಯಲ್ಲಿ ಐದಾರು ಶಾಸಕರು ಆಯ್ಕೆ ಆಗಿ ಬರುತ್ತಿದ್ದರು. ನಿಮ್ಮ ಕಾಲಿನ ಮೇಲೆ ನೀವೆ ಕಲ್ಲು ಬೀಳಿಸಿಕೊಂಡಿದ್ದೀರಿ ಎಂದು ಹೇಳುವ ಮೂಲಕ ಬೆಳಗಾವಿ ಎಂಇಎಸ್ ನಾಯಕರನ್ನುದ್ದೇಶಿಸಿ ಮಾತಾಡಿ ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಉದ್ಧವ್ ಠಾಕ್ರೆ ಮಾಡಿದ್ದಾರೆ. ಇನ್ನು ಮರಾಠಿ ಅಸ್ಮಿತೆ, ಮರಾಠಿಗರ ತಾಖತ್ ತೋರಿಸುವ ಕಾಲ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆ ವೇಳೆ ಅನ್ಯಾಯವಾಗಿದೆ. ಕನ್ನಡಿಗರು ಮಾಡುತ್ತಿರುವ ದೌರ್ಜನ್ಯ ನಾವು ಸಹಿಸಲ್ಲ. ಮರಾಠಿಗರ ಮೇಲೆ ದೌರ್ಜನ್ಯ ಆದ್ರೆ ನಾವು‌ ಗಲಾಟೆ ಮಾಡೋರೆ. ನೀವು ಎಲ್ಲರೂ ಒಗ್ಗೂಡಿ ಹೋರಾಡಿ ಬೆಳಗಾವಿಯಲ್ಲಿ ಮರಾಠಿ ಭಾಷಿಕ ಶಾಸಕ ಮತ್ತೆ ಆಯ್ಕೆ ಆಗಿ ಬರಬೇಕು. ಕರ್ನಾಟಕ ಸರ್ಕಾರ ಬೆನ್ನಿಗೆ ಚೂರಿ ಹಾಕುತ್ತಿದೆ ತಿಳಿದುಕೊಳ್ಳಿ ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಮತ್ತೆ ಉದ್ಧಟತನ ಮೆರೆದ ಮಹಾರಾಷ್ಟ್ರ.. ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ

ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ