AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿವಿವಾದ ಅಂತಿಮ ವಿಚಾರಣೆ: ತೊಡೆ ತಟ್ಟಲು ಸಜ್ಜಾದ ಮಹಾರಾಷ್ಟ್ರ, ಇತ್ತ ಗುಪ್​ ಚುಪ್ ಕುಳಿತ ಕರ್ನಾಟಕ ಸರ್ಕಾರ

ಗಡಿವಿವಾದ ಅಂತಿಮ ವಿಚಾರಣೆಗೆ ದಿನಾಂಕ ನಿಗದಿಯಾಗಿದ್ದು, ಕಾನೂನಾತ್ಮಕ ಹೋರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಎಲ್ಲಾ ರೀತಿ ತಯಾರಿ ಮಾಡಿಕೊಂಡಿದೆ. ಆದ್ರೆ, ಇತ್ತ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸೈಲೆಂಟ್ ಆಗಿದೆ.

ಗಡಿವಿವಾದ ಅಂತಿಮ ವಿಚಾರಣೆ: ತೊಡೆ ತಟ್ಟಲು ಸಜ್ಜಾದ ಮಹಾರಾಷ್ಟ್ರ, ಇತ್ತ ಗುಪ್​ ಚುಪ್ ಕುಳಿತ ಕರ್ನಾಟಕ ಸರ್ಕಾರ
ಗಡಿವಿವಾದ ಅಂತಿಮ ವಿಚಾರಣೆ ಸಂಬಂಧ ಸಭೆ ಮಾಡಿದ ಮಹಾ ಸರ್ಕಾರ
TV9 Web
| Edited By: |

Updated on:Nov 21, 2022 | 10:43 PM

Share

ಬೆಂಗಳೂರು/ಬೆಳಗಾವಿ: ಮಹಾಜನ್​ ಆಯೋಗದ ವರದಿ ತಿರಸ್ಕರಿಸಿ 2004ರಲ್ಲಿ ಅಂದಿನ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್​ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಇದೀಗ 18 ವರ್ಷಗಳ ನಂತರ ಬೆಳಗಾವಿ ಗಡಿ ವಿವಾದದ ಬಗ್ಗೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಇದೇ ನವೆಂಬರ್ 23ರಂದು ಸುಪ್ರೀಂಕೋರ್ಟ್​ನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ವಿರುದ್ಧ ತೊಡೆತಟ್ಟಿ ನಿಲ್ಲಲು ಸಜ್ಜಾಗಿದ್ದು, ಗಡಿಭಾಗದ ಸಮಸ್ಯೆ ಪರಿಹಾರಕ್ಕಾಗಿ ಇಬ್ಬರು ಸಚಿವರ ಸಮಿತಿ ನೇಮಕ ಮಾಡಿದೆ.

ಅಂತಿಮ ವಿಚಾರಣೆ ಹಿನ್ನೆಲೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಗಡಿವಿವಾದ ಕಾನೂನು ಹೋರಾಟ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಬಳಿಕ ಮಹಾರಾಷ್ಟ್ರ ಸರ್ಕಾರ ಕೈಗೊಳ್ಳಬೇಕಾದ ನಡೆ ಬಗ್ಗೆ ಮಹತ್ವದ ಚರ್ಚೆ ಆಗಿದೆ.

ಅಲ್ಲದೇ ಸಿಎಂ ಶಿಂಧೆ ಗಡಿಭಾಗದ ಸಮಸ್ಯೆ ಪರಿಹಾರಕ್ಕಾಗಿ ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ್ ಹಾಗೂ ಅಬಕಾರಿ ಸಚಿವ ಶಂಭುರಾಜೆ ದೇಸಾಯಿ ಸಮಿತಿ ರಚಿಸಿದ್ದಾರೆ. ಇನ್ನು ಕೋರ್ಟ್​ನಲ್ಲಿ ಪ್ರಬಲ ವಾದ ಮಂಡಿಸುವಂತೆ ಸರ್ವಪಕ್ಷಗಳ ಆಗ್ರಹಿಸಿವೆ. ಅಲ್ಲದೇ, ಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವಂತೆ ಒತ್ತಾಯಿಸಿವೆ.

ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ಸರ್ಕಾರ ಸೈಲೆಂಟ್

ಬೆಳಗಾವಿ ಗಡಿಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಕಾನೂನಾತ್ಮಕ ಹೋರಾಟಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಇತ್ತ ಕರ್ನಾಟಕ ಸರ್ಕಾರ ಯಾವುದೇ ಸಭೆ ಮಾಡದೇ ಗಪ್​ ಚುಪ್​ ಆಗಿ ಕುಳಿಕುಕೊಂಡಿದೆ. ಅಂತಿಮ ವಿಚಾರಣೆ ಇರುವುದರಿಂದ ಕೋರ್ಟ್ ನೀಡುವ ಆದೇಶ ಬಳಿಕ ಮುಂದೆ ಯಾವ ಹೆಜ್ಜೆ ಇಡಬೇಕೆನ್ನುವ ತೀರ್ಮಾನ ತೆಗೆದುಕೊಳ್ಳಲು ಬೊಮ್ಮಾಯಿ ಸರ್ಕಾರ ಕನಿಷ್ಠ ಪಕ್ಷ ಒಂದು ಸರ್ವ ಪಕ್ಷಗಳ ಸಭೆ ಮಾಡಬೇಕಿತ್ತು. ಆದ್ರೆ, ಬಿಜೆಪಿ ಸರ್ಕಾರ ಅದ್ಯಾವುದನ್ನು ಮಾಡದೇ ಕೇವಲ ಮುಂದಿನ ಚುನಾವಣೆಯ ತಯಾರಿಯಲ್ಲಿ ಬ್ಯುಸಿಯಾಗಿದೆ. ಇದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಮಹಾರಾಷ್ಟ್ರದಲ್ಲಿ ಗಡಿವಿವಾದ ಸಂಬಂಧ ಹೈ ಪವರ್ ಮೀಟಿಂಗ್ ನಡೆಯುತ್ತಿದ್ದರೂ ಕರ್ನಾಟಕದಲ್ಲಿ ಯಾವುದೇ ಹೈ ಪವರ್, ಲೋ ಪವರ್ ಕಮಿಟಿಯೂ ಇಲ್ಲದೆ ಸೈಲೆಂಟ್ ಆಗಿದೆ. ಇದರಿಂದ  ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ ರಾಜ್ಯ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯ ಸರ್ಕಾರ ನಿಧಾನವೇ ಪ್ರದಾನ ಎಂಬ ರೀತಿಯ ನಡವಳಿಕೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಏನು ನಿರ್ಣಯ ಕೈಗೊಳ್ಳುತ್ತೆ ಕಾದು ನೋಡಬೇಕು.

Published On - 10:37 pm, Mon, 21 November 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್