ಖಾಸಗಿ ಆಸ್ಪತ್ರೆಯ ಕಳ್ಳಾಟಕ್ಕೆ ಬಿಬಿಎಂಪಿ ಅಧಿಕಾರಿಗಳಿಂದ ಬಿತ್ತು ಬ್ರೇಕ್, OPD ಸೀಲ್​​

ಬೆಂಗಳೂರು: ಸರ್ಕಾರದ ಕಡೆಯಿಂದ ಶಿಫಾರಸು ಮಾಡಲಾದ ಸೋಂಕಿತರಿಂದ ಮುಂಗಡ ಹಣ ಪಾವತಿಸಿಕೊಂಡು, ನಂತರ ಅವರನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನೆಪ ಹೇಳುತ್ತಿದ್ದ  ಖಾಸಗಿ ಆಸ್ಪತ್ರೆಯ OPD ಯನ್ನು ಅಧಿಕಾರಿಗಳು ಸೀಲ್​ ಮಾಡಿದ್ದಾರೆ. ವಸಂತನಗರದ ಮಹಾವೀರ್​ ಜೈನ್ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಸೀಲ್​ ಮಾಡಲಾಗಿದೆ. ಜೈನ್ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಕಡೆಯಿಂದ ದಾಖಲಾಗುವ ಸೋಂಕಿತರಿಂದ ಮುಂಗಡ ಹಣ ಪಡೆದು, ನಂತರ ರೋಗಿಗಳನ್ನು ದಾಖಲಿಸಿಕೊಳ್ಳದೆ ನೆಪ  ಹೇಳುತ್ತಿತ್ತು ಎಂದು ತಿಳಿದುಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಿಬಿಎಂಪಿ ಪೂರ್ವ ವಲಯದ […]

ಖಾಸಗಿ ಆಸ್ಪತ್ರೆಯ ಕಳ್ಳಾಟಕ್ಕೆ ಬಿಬಿಎಂಪಿ ಅಧಿಕಾರಿಗಳಿಂದ ಬಿತ್ತು ಬ್ರೇಕ್, OPD ಸೀಲ್​​
ಸಾಧು ಶ್ರೀನಾಥ್​

Updated on: Aug 04, 2020 | 6:50 PM

ಬೆಂಗಳೂರು: ಸರ್ಕಾರದ ಕಡೆಯಿಂದ ಶಿಫಾರಸು ಮಾಡಲಾದ ಸೋಂಕಿತರಿಂದ ಮುಂಗಡ ಹಣ ಪಾವತಿಸಿಕೊಂಡು, ನಂತರ ಅವರನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನೆಪ ಹೇಳುತ್ತಿದ್ದ  ಖಾಸಗಿ ಆಸ್ಪತ್ರೆಯ OPD ಯನ್ನು ಅಧಿಕಾರಿಗಳು ಸೀಲ್​ ಮಾಡಿದ್ದಾರೆ.


ವಸಂತನಗರದ ಮಹಾವೀರ್​ ಜೈನ್ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಸೀಲ್​ ಮಾಡಲಾಗಿದೆ. ಜೈನ್ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಕಡೆಯಿಂದ ದಾಖಲಾಗುವ ಸೋಂಕಿತರಿಂದ ಮುಂಗಡ ಹಣ ಪಡೆದು, ನಂತರ ರೋಗಿಗಳನ್ನು ದಾಖಲಿಸಿಕೊಳ್ಳದೆ ನೆಪ  ಹೇಳುತ್ತಿತ್ತು ಎಂದು ತಿಳಿದುಬಂದಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಪಲ್ಲವಿಯವರ ನೇತೃತ್ವದಲ್ಲಿ ಇಂದು ಆಸ್ಪತ್ರೆಗೆ ಭೇಟಿನೀಡಿದ ಅಧಿಕಾರಿಗಳು ಆಸ್ಪತ್ರೆಯ OPD ಯನ್ನು ಸೀಲ್​ ಮಾಡಿ ನೋಟಿಸ್ ಜಾರಿ ಮಾಡಿದ್ದಾರೆ.

Published On - 6:43 pm, Tue, 4 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us