AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಕೋಟಿ ಕೊಟ್ಟು ಹೊಸ ವಾಹನ ಖರೀದಿಸಿದ ಮಹೇಶ್​ ಬಾಬು; ಏನಿದರ ವಿಶೇಷತೆ?

ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ಶಾರುಖ್​ ಖಾನ್​ ದುಬಾರಿ ವ್ಯಾನಿಟಿ ವ್ಯಾನ್​ ಇದೆ. ಮಹೇಶ್​ ಬಾಬು ಹೊಂದಿರುವ ಕ್ಯಾರಾವಾನ್​ ಬೆಲೆ ಇದಕ್ಕೂ ದುಬಾರಿ ಇದೆ ಎನ್ನಲಾಗಿದೆ.

8 ಕೋಟಿ ಕೊಟ್ಟು ಹೊಸ ವಾಹನ ಖರೀದಿಸಿದ ಮಹೇಶ್​ ಬಾಬು; ಏನಿದರ ವಿಶೇಷತೆ?
ಮಹೇಶ್​ ಬಾಬು ಕಾರವಾನ್
ರಾಜೇಶ್ ದುಗ್ಗುಮನೆ
|

Updated on:Mar 18, 2021 | 6:16 PM

Share

ಸೆಲೆಬ್ರಿಟಿಗಳು ವಾಹನ ಖರೀದಿ ಮಾಡಿದರೆ ಅದು ಸುದ್ದಿಯಾಗೋದು ಸಾಮಾನ್ಯ. ಅವರು ಖರೀದಿಸಿದ ವಾಹನ ಯಾವ ಕಂಪನಿಯದ್ದು, ಯಾವ ಮಾಡೆಲ್​, ಅದಕ್ಕೆ ಎಷ್ಟು ಬೆಲೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತದೆ. ಇದಕ್ಕೆ ಈಗ ಹೊಸ ಸೇರ್ಪಡೆ ಟಾಲಿವುಡ್​ ನಟ ಮಹೇಶ್​ ಬಾಬು. ಅವರು ಹೊಸದಾಗಿ ವಾಹನವೊಂದನ್ನು ಖರೀದಿ ಮಾಡಿದ್ದು, ಇದರ ಬೆಲೆ ಒಂದಲ್ಲ, ಎರಡಲ್ಲ ಬರೋಬ್ಬರಿ 8 ಕೋಟಿ ರೂಪಾಯಿ. ಅಷ್ಟಕ್ಕೂ ಮಹೇಶ್​ ಬಾಬು ಖರೀದಿ ಮಾಡಿದ ವಾಹನ ಯಾವುದು? ಅದರ ವಿಶೇಷತೆ ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಎರಡು ಸಿನಿಮಾಗಳಲ್ಲಿ ಬ್ಯುಸಿ ಇರುವ ಮಹೇಶ್​ ಬಾಬು ಕಾರವಾನ್​ ಒಂದನ್ನು ಖರೀದಿ ಮಾಡಿದ್ದಾರೆ. ದುಬಾರಿ ಬೆಲೆಯ ಈ ವಾಹನಕ್ಕೆ ಮಹೇಶ್​ ಬಾಬು 8 ಕೋಟಿ ರೂಪಾಯಿ ನೀಡಿದ್ದಾರೆ. ಈ ಕಾರವಾನ್​ ಒಳಭಾಗವನ್ನು ನೋಡಿದ ಅನೇಕರು ಅಚ್ಚರಿ ಹೊರ ಹಾಕಿದ್ದಾರೆ. ಮಹೇಶ್​ ಬಾಬು ಇತ್ತೀಚೆಗೆ ಸಿನಿಮಾ ಸೆಟ್​ಗೆ ಇದನ್ನು ಕೊಂಡೊಯ್ದಿದ್ದರು. ಸಿನಿಮಾ ಶೂಟಿಂಗ್​ ಮಧ್ಯೆ ಇದೇ ಕಾರಾವಾನ್​ಗೆ ತೆರಳಿ ರೆಸ್ಟ್​ ಮಾಡಿದ್ದರು. ಹೀಗಾಗಿ, ಇದು ಎಲ್ಲರ ಗಮನ ಸೆಳೆದಿದೆ.

ಭಾರತದಲ್ಲಿ ಅನೇಕ ಸ್ಟಾರ್​ಗಳು ಕಾರಾವಾನ್​ ಹೊಂದಿದ್ದಾರೆ. ಆದರೆ, ಇಷ್ಟು ದೊಡ್ಡ ಮೊತ್ತದಲ್ಲಿ ಯಾರೊಬ್ಬರೂ ಕಾರವಾನ್​ ಹೊಂದಿಲ್ಲ ಎನ್ನಲಾಗಿದೆ. ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ಶಾರುಖ್​ ಖಾನ್​ ದುಬಾರಿ ವ್ಯಾನಿಟಿ ವ್ಯಾನ್​ ಇದೆ. ಮಹೇಶ್​ ಬಾಬು ಹೊಂದಿರುವ ಕ್ಯಾರಾವಾನ್​ ಬೆಲೆ ಇದಕ್ಕೂ ದುಬಾರಿ ಇದೆ ಎನ್ನಲಾಗಿದೆ. ಈ ಕಾರವಾನ್​ ಸಾಕಷ್ಟು ಫೀಚರ್​ಗಳನ್ನು ಹೊಂದಿದೆ. ಈ ಕ್ಯಾರಾವಾನ್​ನಲ್ಲಿ ಟಿವಿ ಇದೆ. ಸಣ್ಣ ಕಿಚನ್​, ವಾಶ್​​ರೂಂ ಇದೆ. ವಿಶೇಷ ಎಂದರೆ, ಇಲ್ಲಿ ಬಿಸಿ ಹಾಗೂ ತಂಪು ನೀರು ಎರಡೂ ಸಿಗಲಿದೆ. ಮೀಟಿಂಗ್​ ರೂಂ ಮತ್ತು ಬೆಡ್​ ರೂಂ ಕೂಡ ಇದೆ.

ಈ ಕಾರವಾನ್​ ಮೂಲ ಬೆಲೆ 6.25 ಕೋಟಿ ರೂಪಾಯಿ ಅಂತೆ. ಇಂಟೀರಿಯರ್​ ಡಿಸೈನ್​ಗಾಗಿ ಮಹೇಶ್​ ಬಾಬು ಹೆಚ್ಚುವರಿಯಾಗಿ 2 ಕೋಟಿ ರೂಪಾಯಿ ವೆಚ್ಚ ಮಾಡಿದ್ದಾರಂತೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: ರಾಬರ್ಟ್ ಸಿನಿಮಾದ ಸಕ್ಸಸ್ ಮೀಟ್: ಹಿಂದೆ ಮುಂದೆ ನೋಡ್ದೆ ಒಪ್ಕೊಂಡಿದ್ದಕ್ಕೆ ಫಲ ಸಿಕ್ತು ಎಂದ ಶಿವರಾಜ್​ ಕೆ ಆರ್​ ಪೇಟೆ

Published On - 6:14 pm, Thu, 18 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್