ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ

ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಕೈಹಿಡಿದೆ‌. ಈ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಿದರೇ ಪಕ್ಷಕ್ಕೆ ಲಾಭ ಆಗುತ್ತದೆ ಎನ್ನುವುದು ವೈಯಕ್ತಿಕ ಅಭಿಪ್ರಾಯ ಎಂದು ಸಚಿವ ಕೆಎನ್​ ರಾಜಣ್ಣ ಹೇಳಿದರು.

ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ
ಸಚಿವ ಕೆಎನ್​ ರಾಜಣ್ಣ
Follow us
| Updated By: ವಿವೇಕ ಬಿರಾದಾರ

Updated on: Sep 16, 2023 | 11:37 AM

ತುಮಕೂರು ಸೆ.16: ಲೋಕಸಭಾ ಚುನಾವಣೆಗೆ (Loksabha Election) ಈಗಿರುವ ಸಮುದಾಯಕ್ಕಿಂತ ಇನ್ನೂ ಹೆಚ್ಚಿನ ಸಮುದಾಯಗಳ ಬೆಂಬಲ ಪಡೆಯಲು ಮೂರು ಉಪಮುಖ್ಯಮಂತ್ರಿ (DCM) ಹುದ್ದೆ ಸೃಷ್ಟಿ ‌ಮಾಡಬೇಕು ಎನ್ನುವುದು ನನ್ನ ಮನವಿ. ಈ ಒಂದು ವಿಶ್ವಾಸಕ್ಕೆ ಪೂರಕವಾಗಿ ಇನ್ನೂ ಹೆಚ್ಚು ಸಮುದಾಯಗಳ ಬೆಂಬಲ ‌ನೀಡಲು ಅನುಕೂಲ ಆಗುತ್ತೆ ಎನ್ನುವ ದೃಷ್ಟಿಯಲ್ಲಿ ಮನವಿ ಮಾಡಿದ್ದೇನೆ. ಪರಿಶಿಷ್ಟ ಜಾತಿ ಪಂಗಡ ಸಮುದಾಯದ, ಅಲ್ಪಸಂಖ್ಯಾತದಿಂದ ಮತ್ತು ವೀರಶೈವ ಸಮುದಾಯದ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಹೇಳಿದರು.

ನಿಮ್ಮ ಈ ಮನವಿಯಿಂದ ಡಿಸಿಎಂ ಡಿಕೆ ಶಿವಕುಮಾರ್​​ ಅಸಮಾಧಾನಗೊಳ್ಳಲ್ಲವಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಡಿಕೆ ಬ್ರದರ್ಸ್ ಹೇಗೆ ಅಸಮಾಧಾನ ಆಗುತ್ತಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಿದ್ದಾರೆ. ಅವರಿಗೆ ಪಕ್ಷ ಸಂಘಟನೆ ಮಾಡುವ ಚಾಣಾಕ್ಷತನ ಇದೆ. ಅವರು ಅಸಮಾಧಾನಗೊಳ್ಳುವ ಸಂದರ್ಭ ಉದ್ಭವವಾಗುವುದಿಲ್ಲ, ಅನ್ನೋದು ನನ್ನ ಭಾವನೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಕೈಹಿಡಿದೆ‌. ಈ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಿದರೇ ಪಕ್ಷಕ್ಕೆ ಲಾಭ ಆಗುತ್ತದೆ ಎನ್ನುವುದು ವೈಯಕ್ತಿಕ ಅಭಿಪ್ರಾಯ. ಪಕ್ಷದ ಹೈಕಮಾಂಡ್​ಗೆ ಮುಟ್ಟಿಸುವ ಕೆಲಸ ನಾವು ಮಾಡೊದು ಸೂಕ್ತ. ಹೈಕಮಾಂಡ್​ಗೆ ಪತ್ರ ಬರೆಯಬೇಕೆಂದು ಎಂದುಕೊಂಡಿದ್ದೇನೆ. ಹೈದರಾಬಾದ್​ನಲ್ಲಿ ವರ್ಕಿಂಗ್ ಕಮಿಟಿ ಮಿಟಿಂಗ್ ಇರುವ ಕಾರಣ ನಾಯಕರು ಬ್ಯುಸಿ ಆಗಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ವಾಲ್ಮೀಕಿ ಸಮುದಾಯದವರು ಸಿಎಂ ಆಗಬೇಕು ಎಂದ ಸ್ವಾಮೀಜಿ, ಸತೀಶ್ ಜಾರಕಿಹೊಳಿಗೆ ಅರ್ಹತೆ ಇದೆ ಎಂದ ಸಚಿವ ಕೆಎನ್ ರಾಜಣ್ಣ

ಹೈಕಮಾಂಡ್ ಯಾರಿಗೆ ಬೇಕಾದರೂ ಡಿಸಿಎಂ ನೀಡಲಿ. ಕಾಂಗ್ರೆಸ್ ಪಕ್ಷದಲ್ಲಿ ಏನೆ ತಿರ್ಮಾನ ಇದ್ದರು ಅದು ಹೈಕಮಾಂಡ್ ಮಾಡುತ್ತೆ. ಪಕ್ಷದ ಹಿತದೃಷ್ಟಿಯಿಂದ ಇದು ಸೂಕ್ತ. ಯಾರು ಅಭಿಪ್ರಾಯ ವ್ಯಕ್ತಪಡಿಸಿತ್ತಾರೆ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇನೆ.

ರಾಜ್ಯದಲ್ಲಿ ಸರ್ಕಾರ ತಂದ ಐದು ಯೋಜನೆಗಳು ಯಶಸ್ಸಿ ಆಗುತ್ತಿದೆ. ನಮ್ಮ ಸರ್ಕಾರಕ್ಕೆ ನುಡಿದಂತೆ ನಡೆದಿರುವ ಆತ್ಮ ವಿಶ್ವಾಸ ಇದೆ. ಲೋಕಸಭಾ ಚುನಾವಣೆ ಮನೆ ಹೊಸ್ತಿಲಲ್ಲಿ ಬಂದು ನಿಂತಿದೆ. ಆ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಅತಿಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಭವಿಷ್ಯ ನುಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್