AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ

ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಕೈಹಿಡಿದೆ‌. ಈ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಿದರೇ ಪಕ್ಷಕ್ಕೆ ಲಾಭ ಆಗುತ್ತದೆ ಎನ್ನುವುದು ವೈಯಕ್ತಿಕ ಅಭಿಪ್ರಾಯ ಎಂದು ಸಚಿವ ಕೆಎನ್​ ರಾಜಣ್ಣ ಹೇಳಿದರು.

ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ
ಸಚಿವ ಕೆಎನ್​ ರಾಜಣ್ಣ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 16, 2023 | 11:37 AM

Share

ತುಮಕೂರು ಸೆ.16: ಲೋಕಸಭಾ ಚುನಾವಣೆಗೆ (Loksabha Election) ಈಗಿರುವ ಸಮುದಾಯಕ್ಕಿಂತ ಇನ್ನೂ ಹೆಚ್ಚಿನ ಸಮುದಾಯಗಳ ಬೆಂಬಲ ಪಡೆಯಲು ಮೂರು ಉಪಮುಖ್ಯಮಂತ್ರಿ (DCM) ಹುದ್ದೆ ಸೃಷ್ಟಿ ‌ಮಾಡಬೇಕು ಎನ್ನುವುದು ನನ್ನ ಮನವಿ. ಈ ಒಂದು ವಿಶ್ವಾಸಕ್ಕೆ ಪೂರಕವಾಗಿ ಇನ್ನೂ ಹೆಚ್ಚು ಸಮುದಾಯಗಳ ಬೆಂಬಲ ‌ನೀಡಲು ಅನುಕೂಲ ಆಗುತ್ತೆ ಎನ್ನುವ ದೃಷ್ಟಿಯಲ್ಲಿ ಮನವಿ ಮಾಡಿದ್ದೇನೆ. ಪರಿಶಿಷ್ಟ ಜಾತಿ ಪಂಗಡ ಸಮುದಾಯದ, ಅಲ್ಪಸಂಖ್ಯಾತದಿಂದ ಮತ್ತು ವೀರಶೈವ ಸಮುದಾಯದ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಹೇಳಿದರು.

ನಿಮ್ಮ ಈ ಮನವಿಯಿಂದ ಡಿಸಿಎಂ ಡಿಕೆ ಶಿವಕುಮಾರ್​​ ಅಸಮಾಧಾನಗೊಳ್ಳಲ್ಲವಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಡಿಕೆ ಬ್ರದರ್ಸ್ ಹೇಗೆ ಅಸಮಾಧಾನ ಆಗುತ್ತಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಿದ್ದಾರೆ. ಅವರಿಗೆ ಪಕ್ಷ ಸಂಘಟನೆ ಮಾಡುವ ಚಾಣಾಕ್ಷತನ ಇದೆ. ಅವರು ಅಸಮಾಧಾನಗೊಳ್ಳುವ ಸಂದರ್ಭ ಉದ್ಭವವಾಗುವುದಿಲ್ಲ, ಅನ್ನೋದು ನನ್ನ ಭಾವನೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಕೈಹಿಡಿದೆ‌. ಈ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಿದರೇ ಪಕ್ಷಕ್ಕೆ ಲಾಭ ಆಗುತ್ತದೆ ಎನ್ನುವುದು ವೈಯಕ್ತಿಕ ಅಭಿಪ್ರಾಯ. ಪಕ್ಷದ ಹೈಕಮಾಂಡ್​ಗೆ ಮುಟ್ಟಿಸುವ ಕೆಲಸ ನಾವು ಮಾಡೊದು ಸೂಕ್ತ. ಹೈಕಮಾಂಡ್​ಗೆ ಪತ್ರ ಬರೆಯಬೇಕೆಂದು ಎಂದುಕೊಂಡಿದ್ದೇನೆ. ಹೈದರಾಬಾದ್​ನಲ್ಲಿ ವರ್ಕಿಂಗ್ ಕಮಿಟಿ ಮಿಟಿಂಗ್ ಇರುವ ಕಾರಣ ನಾಯಕರು ಬ್ಯುಸಿ ಆಗಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ವಾಲ್ಮೀಕಿ ಸಮುದಾಯದವರು ಸಿಎಂ ಆಗಬೇಕು ಎಂದ ಸ್ವಾಮೀಜಿ, ಸತೀಶ್ ಜಾರಕಿಹೊಳಿಗೆ ಅರ್ಹತೆ ಇದೆ ಎಂದ ಸಚಿವ ಕೆಎನ್ ರಾಜಣ್ಣ

ಹೈಕಮಾಂಡ್ ಯಾರಿಗೆ ಬೇಕಾದರೂ ಡಿಸಿಎಂ ನೀಡಲಿ. ಕಾಂಗ್ರೆಸ್ ಪಕ್ಷದಲ್ಲಿ ಏನೆ ತಿರ್ಮಾನ ಇದ್ದರು ಅದು ಹೈಕಮಾಂಡ್ ಮಾಡುತ್ತೆ. ಪಕ್ಷದ ಹಿತದೃಷ್ಟಿಯಿಂದ ಇದು ಸೂಕ್ತ. ಯಾರು ಅಭಿಪ್ರಾಯ ವ್ಯಕ್ತಪಡಿಸಿತ್ತಾರೆ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇನೆ.

ರಾಜ್ಯದಲ್ಲಿ ಸರ್ಕಾರ ತಂದ ಐದು ಯೋಜನೆಗಳು ಯಶಸ್ಸಿ ಆಗುತ್ತಿದೆ. ನಮ್ಮ ಸರ್ಕಾರಕ್ಕೆ ನುಡಿದಂತೆ ನಡೆದಿರುವ ಆತ್ಮ ವಿಶ್ವಾಸ ಇದೆ. ಲೋಕಸಭಾ ಚುನಾವಣೆ ಮನೆ ಹೊಸ್ತಿಲಲ್ಲಿ ಬಂದು ನಿಂತಿದೆ. ಆ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಅತಿಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಭವಿಷ್ಯ ನುಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!