AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಬೃಹತ್​ ವಂಚನೆ: ಸಂಸ್ಥೆಯ ಶಾಖೆಗಳು ಬಂದ್

ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯ ಮೇಲೆ ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿಬಂದಿದೆ. ತಿಂಗಳ ಇಂಟ್ರೆಸ್ಟ್ ಸ್ಕೀಂನಲ್ಲಿ ಹಣ ಇಟ್ಟ ಹಲವರಿಗೆ ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯಿಂದ ವಂಚನೆ ಆರೋಪ ಮಾಡಲಾಗಿದೆ. ಮಂಗಳೂರು ಶಾಖೆಯೊಂದರಲ್ಲೇ ಸುಮಾರು 40 ಕೋಟಿಗೂ ಅಧಿಕ ಹಣ ಪಂಗನಾಮ‍ ಹಾಕಿದ್ದಾರೆ ಎಂದು ಫಿಕ್ಸ್ ಡೆಪಾಸಿಟ್ ಇಟ್ಟಿರುವ 800ಕ್ಕೂ ಅಧಿಕ ಜನ ಆರೋಪ ಮಾಡುತ್ತಿದ್ದಾರೆ. ಮಂಗಳೂರು,ಮುಂಬಯಿನಲ್ಲಿ ಶಾಖೆಗಳನ್ನು ಹೊಂದಿರುವ ಮಲೈಕಾ ಸಂಸ್ಥೆ ಫಿಕ್ಸ್ ಡೆಫಾಸಿಟ್ ಹಣ ವಾಪಸು […]

ಮಲೈಕಾ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಬೃಹತ್​ ವಂಚನೆ: ಸಂಸ್ಥೆಯ ಶಾಖೆಗಳು ಬಂದ್
ಪೃಥ್ವಿಶಂಕರ
| Edited By: |

Updated on: Nov 22, 2020 | 11:13 AM

Share

ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯ ಮೇಲೆ ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿಬಂದಿದೆ.

ತಿಂಗಳ ಇಂಟ್ರೆಸ್ಟ್ ಸ್ಕೀಂನಲ್ಲಿ ಹಣ ಇಟ್ಟ ಹಲವರಿಗೆ ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯಿಂದ ವಂಚನೆ ಆರೋಪ ಮಾಡಲಾಗಿದೆ. ಮಂಗಳೂರು ಶಾಖೆಯೊಂದರಲ್ಲೇ ಸುಮಾರು 40 ಕೋಟಿಗೂ ಅಧಿಕ ಹಣ ಪಂಗನಾಮ‍ ಹಾಕಿದ್ದಾರೆ ಎಂದು ಫಿಕ್ಸ್ ಡೆಪಾಸಿಟ್ ಇಟ್ಟಿರುವ 800ಕ್ಕೂ ಅಧಿಕ ಜನ ಆರೋಪ ಮಾಡುತ್ತಿದ್ದಾರೆ.

ಮಂಗಳೂರು,ಮುಂಬಯಿನಲ್ಲಿ ಶಾಖೆಗಳನ್ನು ಹೊಂದಿರುವ ಮಲೈಕಾ ಸಂಸ್ಥೆ ಫಿಕ್ಸ್ ಡೆಫಾಸಿಟ್ ಹಣ ವಾಪಸು ನೀಡದೆ ವಂಚಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಸಂಸ್ಥೆ ಶಾಖೆಗಳನ್ನು ಬಂದ್ ಮಾಡಿ ದೋಖಾ ಮಾಡಿದ್ದಾರೆ. ಅಲ್ಲದೆ ಮಂಗಳೂರಿನ ಬೆಂದೂರ್ ವೆಲ್​ನಲ್ಲಿರುವ ಸೊಸೈಟಿಯ ಪ್ರಧಾನ ಕಚೇರಿಯು ಸಹ ಬಂದ್ ಆಗಿದೆ. ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆಗಿದೆ ಎಂದು ಜನ ಆರೋಪ ಮಾಡುತ್ತಿದ್ದಾರೆ.

ವಂಚನೆಗೊಳಗಾದವರು ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂಸ್ಥೆಯ ಸ್ಥಾಪಕ ಗಿಲ್ಬರ್ಟ್ ಬ್ಯಾಪಿಸ್ಟ್, ಪತ್ನಿ ಮರ್ಸಿಲಿನ್ ಬ್ಯಾಪ್ಟಿಸ್ಟ್ ಸೇರಿದಂತೆ ಆಡಳಿತ ಮಂಡಳಿಯ 12 ಮಂದಿ ವಿರುದ್ದ ದೂರು ದಾಖಲಾಗಿದೆ. ಸದ್ಯ ಮಂಗಳೂರು ಬ್ರ್ಯಾಂಚ್ ಮ್ಯಾನೇಜರ್ ರೀನಾ ಜೋಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೀನಾ ಜೋಶ್​ಳನ್ನು ಬಂಧಿಸಿರುವ ಪೊಲೀಸರು ಬೆಂದೂರ್ ವೆಲ್​ನ ಪ್ರಧಾನ ಕಚೇರಿಯಲ್ಲಿ ಸ್ಥಳ ಮಹಜರುಗೆ ಕರೆತಂದು ಸಂಸ್ಥೆಗೆ ಸಂಬಂಧಪಟ್ಟಂತ ದಾಖಲೆಗಳನ್ನು ಎನ್.ಸಿ.ಇ.ಪಿ.ಎಸ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ