AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಬೃಹತ್​ ವಂಚನೆ: ಸಂಸ್ಥೆಯ ಶಾಖೆಗಳು ಬಂದ್

ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯ ಮೇಲೆ ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿಬಂದಿದೆ. ತಿಂಗಳ ಇಂಟ್ರೆಸ್ಟ್ ಸ್ಕೀಂನಲ್ಲಿ ಹಣ ಇಟ್ಟ ಹಲವರಿಗೆ ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯಿಂದ ವಂಚನೆ ಆರೋಪ ಮಾಡಲಾಗಿದೆ. ಮಂಗಳೂರು ಶಾಖೆಯೊಂದರಲ್ಲೇ ಸುಮಾರು 40 ಕೋಟಿಗೂ ಅಧಿಕ ಹಣ ಪಂಗನಾಮ‍ ಹಾಕಿದ್ದಾರೆ ಎಂದು ಫಿಕ್ಸ್ ಡೆಪಾಸಿಟ್ ಇಟ್ಟಿರುವ 800ಕ್ಕೂ ಅಧಿಕ ಜನ ಆರೋಪ ಮಾಡುತ್ತಿದ್ದಾರೆ. ಮಂಗಳೂರು,ಮುಂಬಯಿನಲ್ಲಿ ಶಾಖೆಗಳನ್ನು ಹೊಂದಿರುವ ಮಲೈಕಾ ಸಂಸ್ಥೆ ಫಿಕ್ಸ್ ಡೆಫಾಸಿಟ್ ಹಣ ವಾಪಸು […]

ಮಲೈಕಾ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಬೃಹತ್​ ವಂಚನೆ: ಸಂಸ್ಥೆಯ ಶಾಖೆಗಳು ಬಂದ್
ಪೃಥ್ವಿಶಂಕರ
| Edited By: |

Updated on: Nov 22, 2020 | 11:13 AM

Share

ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯ ಮೇಲೆ ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿಬಂದಿದೆ.

ತಿಂಗಳ ಇಂಟ್ರೆಸ್ಟ್ ಸ್ಕೀಂನಲ್ಲಿ ಹಣ ಇಟ್ಟ ಹಲವರಿಗೆ ಮಲೈಕಾ ಮಲ್ಟಿ ಸ್ಟೇಟ್ ಕೋಆಪರೇಟಿವ್ ಸೊಸೈಟಿಯಿಂದ ವಂಚನೆ ಆರೋಪ ಮಾಡಲಾಗಿದೆ. ಮಂಗಳೂರು ಶಾಖೆಯೊಂದರಲ್ಲೇ ಸುಮಾರು 40 ಕೋಟಿಗೂ ಅಧಿಕ ಹಣ ಪಂಗನಾಮ‍ ಹಾಕಿದ್ದಾರೆ ಎಂದು ಫಿಕ್ಸ್ ಡೆಪಾಸಿಟ್ ಇಟ್ಟಿರುವ 800ಕ್ಕೂ ಅಧಿಕ ಜನ ಆರೋಪ ಮಾಡುತ್ತಿದ್ದಾರೆ.

ಮಂಗಳೂರು,ಮುಂಬಯಿನಲ್ಲಿ ಶಾಖೆಗಳನ್ನು ಹೊಂದಿರುವ ಮಲೈಕಾ ಸಂಸ್ಥೆ ಫಿಕ್ಸ್ ಡೆಫಾಸಿಟ್ ಹಣ ವಾಪಸು ನೀಡದೆ ವಂಚಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಸಂಸ್ಥೆ ಶಾಖೆಗಳನ್ನು ಬಂದ್ ಮಾಡಿ ದೋಖಾ ಮಾಡಿದ್ದಾರೆ. ಅಲ್ಲದೆ ಮಂಗಳೂರಿನ ಬೆಂದೂರ್ ವೆಲ್​ನಲ್ಲಿರುವ ಸೊಸೈಟಿಯ ಪ್ರಧಾನ ಕಚೇರಿಯು ಸಹ ಬಂದ್ ಆಗಿದೆ. ಒಟ್ಟು 350 ಕೋಟಿಗೂ ಹೆಚ್ಚು ವಂಚನೆ ಆಗಿದೆ ಎಂದು ಜನ ಆರೋಪ ಮಾಡುತ್ತಿದ್ದಾರೆ.

ವಂಚನೆಗೊಳಗಾದವರು ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂಸ್ಥೆಯ ಸ್ಥಾಪಕ ಗಿಲ್ಬರ್ಟ್ ಬ್ಯಾಪಿಸ್ಟ್, ಪತ್ನಿ ಮರ್ಸಿಲಿನ್ ಬ್ಯಾಪ್ಟಿಸ್ಟ್ ಸೇರಿದಂತೆ ಆಡಳಿತ ಮಂಡಳಿಯ 12 ಮಂದಿ ವಿರುದ್ದ ದೂರು ದಾಖಲಾಗಿದೆ. ಸದ್ಯ ಮಂಗಳೂರು ಬ್ರ್ಯಾಂಚ್ ಮ್ಯಾನೇಜರ್ ರೀನಾ ಜೋಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೀನಾ ಜೋಶ್​ಳನ್ನು ಬಂಧಿಸಿರುವ ಪೊಲೀಸರು ಬೆಂದೂರ್ ವೆಲ್​ನ ಪ್ರಧಾನ ಕಚೇರಿಯಲ್ಲಿ ಸ್ಥಳ ಮಹಜರುಗೆ ಕರೆತಂದು ಸಂಸ್ಥೆಗೆ ಸಂಬಂಧಪಟ್ಟಂತ ದಾಖಲೆಗಳನ್ನು ಎನ್.ಸಿ.ಇ.ಪಿ.ಎಸ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!