AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿಗೆ ಗಾಯ; ನೆಟ್ಟಿಗರು ಪ್ರತಿಕ್ರಿಯಿಸಿದ ರೀತಿ ನೋಡಿ

Mamata Banerjee Attacked: ಮಮತಾ ಬ್ಯಾನರ್ಜಿ ಅವರಿಗೆ ಉಂಟಾದ ಗಾಯದ ಕುರಿತು ನೆಟ್ಟಿಗರು ತಮ್ಮದೇ ದೃಷ್ಟಿಕೋನಗಳಲ್ಲಿ ವಿಮರ್ಶಿಸಿದ್ದಾರೆ, ಮೀಮ್​ಗಳನ್ನು ಸೃಷ್ಟಿಸಿ ಟ್ವಿಟರ್​ನಲ್ಲಿ ಹರಿಬಿಡುತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಗಾಯಗೊಂಡಿದ್ದರೂ ಅವರ ಕುರಿತು ವ್ಯಂಗ್ಯ ಮಾಡುತ್ತಿದ್ದಾರೆ ಟ್ವಿಟ್ಟಿಗರು.

ಮಮತಾ ಬ್ಯಾನರ್ಜಿಗೆ ಗಾಯ; ನೆಟ್ಟಿಗರು ಪ್ರತಿಕ್ರಿಯಿಸಿದ ರೀತಿ ನೋಡಿ
ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ ( ಕೃಪೆ: ಅಭಿಷೇಕ್ ಬ್ಯಾನರ್ಜಿ ಟ್ವಿಟರ್ ಖಾತೆ)
guruganesh bhat
| Edited By: |

Updated on:Mar 11, 2021 | 4:24 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ನಂತರ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ನಾಲ್ಕೈದು ಮಂದಿ ನನ್ನನ್ನು ತಳ್ಳಿ ಹಾಕಿದರು ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಈ ಹೊತ್ತಲ್ಲಿ ಅಲ್ಲಿ ಸ್ಥಳೀಯ ಪೊಲೀಸರಾಗಲೀ, ಪೊಲೀಸ್ ಅಧಿಕಾರಿಗಳಾಗಲೀ ಇರಲಿಲ್ಲ. ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದಿದ್ದರು ಬ್ಯಾನರ್ಜಿ. ಬ್ಯಾನರ್ಜಿ ಅವರಿಗೆ ಝೆಡ್ ಪ್ಲಸ್ ಭದ್ರತೆ ಇರುವಾಗ ಈ ಘಟನೆ ಹೇಗೆ ಸಂಭವಿಸಿತು ಎಂಬುದು ಪ್ರಶ್ನೆಯಾಗಿಯೇ ಉಳಿದಿತ್ತು. ಈ ಘಟನೆ ಕುರಿತು ನೆಟ್ಟಿಗರು ವಿಧವಿಧವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ದೇಶದ ವಿವಿಧ ನಾಯಕರು ಈ ಘಟನೆಗೆ ಖೇದ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರೂ ಸಹ, ಟ್ವಿಟ್ಟಿಗರು ಮಮತಾ ಬ್ಯಾನರ್ಜಿ ಅವರಿಗೆ ಉಂಟಾದ ಹಲ್ಲೆಯನ್ನು ತಮ್ಮದೇ ದೃಷ್ಟಿಕೋನಗಳಲ್ಲಿ ವಿಮರ್ಶಿಸಿದ್ದಾರೆ, ಮೀಮ್​ಗಳನ್ನು ಸಹ ಸೃಷ್ಟಿಸಿ ಟ್ವಿಟರ್​ನಲ್ಲಿ ಹರಿಬಿಡುತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಗಾಯಗೊಂಡಿದ್ದರೂ ಅವರ ಕುರಿತು ವ್ಯಂಗ್ಯ ಮಾಡುತ್ತಿದ್ದಾರೆ ಟ್ವಿಟ್ಟಿಗರು.

ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆ ಸೇರಲು ಕಾರಣವಾದ ಘಟನೆಯನ್ನು ಪ್ರತ್ಯಕ್ಷವಾಗಿ ವೀಕ್ಷಿಸುವುದಾಗಿ ಹೇಳಿಕೊಂಡಿರುವ ಕೆಲವರು ಎಎನ್​ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಪ್ರಕಾರ ಘಟನೆ ನಡೆಯುವಾಗ ಯಾರೊಬ್ಬ ಕಿಡಿಗೇಡಿಯೂ ಸ್ಥಳದಲ್ಲಿ ಇರಲಿಲ್ಲ. ಯಾರೂ ಸಹ ಮಮತಾ ಬ್ಯಾನರ್ಜಿ ಅವರನ್ನು ತಳ್ಳಲಿಲ್ಲ ಎಂದು ಚಿತ್ತರಂಜನ್ ದಾಸ್ ಎಂಬ ಪ್ರತ್ಯಕ್ಷದರ್ಶಿ ವಿವರಿಸಿದ್ದಾರೆ.

ಇನ್ನೋರ್ವ ಪ್ರತ್ಯಕ್ಷದರ್ಶಿ ಸುಮನ್ ಮೇಟಿ ಸಹ ಪ್ರತಿಕ್ರಿಯೆ ನೀಡಿದ್ದು, ‘ಮಮತಾ ಬ್ಯಾನರ್ಜಿ ಅವರ ಕಾರು ನಿಧಾನವಾಗಿ ಚಲಿಸುತ್ತಿತ್ತು. ಯಾರೂ ಸಹ ಮಮತಾ ಬ್ಯಾನರ್ಜಿ ಅವರನ್ನು ತಳ್ಳಲಿಲ್ಲ. ಆದರೂ, ಈ ಘಟನೆ ನಡೆದಿದೆ’ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದು ಅವರು ಆಸ್ಪತ್ರೆ ಸೇರಿರುವುದು ದೀದಿಯ ಚುನಾವಣಾ ಪ್ರಚಾರದ ಮುಂದಾಳತ್ವ ವಹಿಸಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬರೆದ ಸ್ಕ್ರಿಪ್ಟ್ ಎಂದು ವ್ಯಾಖ್ಯಾನಿಸಿ ಹಲವು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿಯ ಮೊಣಕಾಲು, ಬಲ ಭುಜ ಮತ್ತು ಕುತ್ತಿಗೆಗೆ ಗಾಯಗಳಾಗಿವೆ: ವೈದ್ಯರ ಹೇಳಿಕೆ

Mamata Banerjee Attacked: ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಲು ಬಂದ ಬಿಜೆಪಿ ನಾಯಕರಿಗೆ ಅನುಮತಿ ನಿರಾಕರಿಸಿದ ವೈದ್ಯರು

Published On - 3:44 pm, Thu, 11 March 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?