AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ಕೇಳಿದ್ದಕ್ಕೆ ಪತ್ನಿಯ ಜೀವ ತೆಗೆದ ಪತಿರಾಯ, ಈಗ ಅವನ ಪ್ರೇಯಸಿಯೂ ಅಂದರ್​

ಹಾಸನ: ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ. ನಾಗರಾಜ್ ಹಾಗೂ ಆತನ ಪ್ರೇಯಸಿ ಶೈಲಾ ಬಂಧಿತ ಆರೋಪಿಗಳು. ಜೀವನಾಂಶ ನೀಡಲು ಕೇಸ್ ಹಾಕಿದ್ದಕ್ಕೆ ಕೊಲೆ ಅಂದ ಹಾಗೆ, ನವೆಂಬರ್​ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು. ಈ ಸುಳಿವನ್ನೇ […]

ಜೀವನಾಂಶ ಕೇಳಿದ್ದಕ್ಕೆ ಪತ್ನಿಯ ಜೀವ ತೆಗೆದ ಪತಿರಾಯ, ಈಗ ಅವನ ಪ್ರೇಯಸಿಯೂ ಅಂದರ್​
KUSHAL V
|

Updated on:Nov 23, 2020 | 5:23 PM

Share

ಹಾಸನ: ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ. ನಾಗರಾಜ್ ಹಾಗೂ ಆತನ ಪ್ರೇಯಸಿ ಶೈಲಾ ಬಂಧಿತ ಆರೋಪಿಗಳು.

ಜೀವನಾಂಶ ನೀಡಲು ಕೇಸ್ ಹಾಕಿದ್ದಕ್ಕೆ ಕೊಲೆ ಅಂದ ಹಾಗೆ, ನವೆಂಬರ್​ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು. ಈ ಸುಳಿವನ್ನೇ ಬೆನ್ನತ್ತಿದ್ದ ಪೊಲೀಸರಿಗೆ ಇದೀಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.

ಅಂದ ಹಾಗೆ, 6 ವರ್ಷದ ಹಿಂದೆ ಸುಶ್ಮಿತಾ ಹಾಗೂ ನಾಗರಾಜ್ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ  ವಿವಾಹವಾಗಿದ್ದರು. ಆದರೆ ನಾಗರಾಜ್, ಇತ್ತೀಚೆಗೆ ಶೈಲಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಸುಶ್ಮಿತಾ ಆತನಿಂದ ದೂರವಾಗಿದ್ದಳು. ಇದಲ್ಲದೆ, ಗಂಡನಿಂದ ಜೀವನಾಂಶ ಪಡೆಯಲು ಕೇಸ್ ಸಹ ಹಾಕಿದ್ದಳು.

ಇದರಿಂದ ಹಾವಿನಂತೆ ಬುಸುಗುಟ್ಟಿದ ನಾಗರಾಜ್​ ನಿನ್ನ ಜೊತೆ ಕೇಸ್​ ಬಗ್ಗೆ ಮಾತನಾಡಬೇಕೆಂದು ನೆಪವೊಡ್ಡಿ ಅಕ್ಟೋಬರ್​ 29ರಂದು ಪತ್ನಿಯನ್ನು ಬೆಲಗೂರಿಗೆ ಕರೆಸಿಕೊಂಡಿದ್ದ. ಅಲ್ಲಿ ತನ್ನ ಪ್ರೇಯಸಿ ಶೈಲಾ ಜೊತೆ ಸೇರಿ ನಾಗರಾಜ್ ಸುಶ್ಮಿತಾಳನ್ನು ಕೊಂದಿದ್ದ.

ನಂತರ, ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಇಬ್ಬರು ಸೇರಿ ಸುಶ್ಮಿತಾಳ ಶವವನ್ನು ಕೆರೆಗೆ ಎಸೆದಿದ್ದರು. ಈ ನಡುವೆ, ಸುಶ್ಮಿತಾ ನಾಪತ್ತೆಯಾಗಿದ್ದಾಳೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನವೆಂಬರ್​ 11ರಂದು ಕೆರೆಯಲ್ಲಿ ಆಕೆಯ ಶವ ಕೆರೆಯಲ್ಲಿ ತೇಲುತ್ತಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು, ನಾಪತ್ತೆ ಕೇಸ್​ ತನಿಖೆ ಕೈಗೆತ್ತಿಕೊಂಡ ಖಾಕಿ ಪಡೆಗೆ ಸೀದಾ ಅನುಮಾನ ಬಂದಿದ್ದು ಸುಶ್ಮಿತಾ ಪತಿ ಮತ್ತು ಆತನ ಪ್ರೇಯಸಿ ಮೇಲೆ. ಇದೀಗ, ಕೊಲೆಯಲ್ಲಿ ಇಬ್ಬರ ಕೈವಾಡವಿರುವುದು ಕಂಡುಬಂದಿದ್ದು ಆರೋಪಿ ಪತಿ ನಾಗರಾಜ್(28), ಆತನ ಸಹೊದರ ಮೋಹನ್ ಹಾಗೂ ನಾಗರಾಜ್ ಗೆಳತಿ ಶೈಲಾರನ್ನು ಪೊಲೀಸರು ಬಂಧಿಸಿದ್ದಾರೆ.

Published On - 5:23 pm, Mon, 23 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್