AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ಕೇಳಿದ್ದಕ್ಕೆ ಪತ್ನಿಯ ಜೀವ ತೆಗೆದ ಪತಿರಾಯ, ಈಗ ಅವನ ಪ್ರೇಯಸಿಯೂ ಅಂದರ್​

ಹಾಸನ: ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ. ನಾಗರಾಜ್ ಹಾಗೂ ಆತನ ಪ್ರೇಯಸಿ ಶೈಲಾ ಬಂಧಿತ ಆರೋಪಿಗಳು. ಜೀವನಾಂಶ ನೀಡಲು ಕೇಸ್ ಹಾಕಿದ್ದಕ್ಕೆ ಕೊಲೆ ಅಂದ ಹಾಗೆ, ನವೆಂಬರ್​ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು. ಈ ಸುಳಿವನ್ನೇ […]

ಜೀವನಾಂಶ ಕೇಳಿದ್ದಕ್ಕೆ ಪತ್ನಿಯ ಜೀವ ತೆಗೆದ ಪತಿರಾಯ, ಈಗ ಅವನ ಪ್ರೇಯಸಿಯೂ ಅಂದರ್​
Follow us
KUSHAL V
|

Updated on:Nov 23, 2020 | 5:23 PM

ಹಾಸನ: ಜಿಲ್ಲೆಯ ಚೀರನಹಳ್ಳಿ ಬಳಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ಹಾಗೂ ಪ್ರೇಯಸಿಯನ್ನು ಬಂಧಿಸಿದ್ದಾರೆ. ನಾಗರಾಜ್ ಹಾಗೂ ಆತನ ಪ್ರೇಯಸಿ ಶೈಲಾ ಬಂಧಿತ ಆರೋಪಿಗಳು.

ಜೀವನಾಂಶ ನೀಡಲು ಕೇಸ್ ಹಾಕಿದ್ದಕ್ಕೆ ಕೊಲೆ ಅಂದ ಹಾಗೆ, ನವೆಂಬರ್​ 11ರಂದು ಚೀರನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದ ವೇಳೆ ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ನಿವಾಸಿ ಸುಶ್ಮಿತಾ(26) ಎಂದು ತಿಳಿದುಬಂದಿತ್ತು. ಈ ಸುಳಿವನ್ನೇ ಬೆನ್ನತ್ತಿದ್ದ ಪೊಲೀಸರಿಗೆ ಇದೀಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.

ಅಂದ ಹಾಗೆ, 6 ವರ್ಷದ ಹಿಂದೆ ಸುಶ್ಮಿತಾ ಹಾಗೂ ನಾಗರಾಜ್ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ  ವಿವಾಹವಾಗಿದ್ದರು. ಆದರೆ ನಾಗರಾಜ್, ಇತ್ತೀಚೆಗೆ ಶೈಲಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಸುಶ್ಮಿತಾ ಆತನಿಂದ ದೂರವಾಗಿದ್ದಳು. ಇದಲ್ಲದೆ, ಗಂಡನಿಂದ ಜೀವನಾಂಶ ಪಡೆಯಲು ಕೇಸ್ ಸಹ ಹಾಕಿದ್ದಳು.

ಇದರಿಂದ ಹಾವಿನಂತೆ ಬುಸುಗುಟ್ಟಿದ ನಾಗರಾಜ್​ ನಿನ್ನ ಜೊತೆ ಕೇಸ್​ ಬಗ್ಗೆ ಮಾತನಾಡಬೇಕೆಂದು ನೆಪವೊಡ್ಡಿ ಅಕ್ಟೋಬರ್​ 29ರಂದು ಪತ್ನಿಯನ್ನು ಬೆಲಗೂರಿಗೆ ಕರೆಸಿಕೊಂಡಿದ್ದ. ಅಲ್ಲಿ ತನ್ನ ಪ್ರೇಯಸಿ ಶೈಲಾ ಜೊತೆ ಸೇರಿ ನಾಗರಾಜ್ ಸುಶ್ಮಿತಾಳನ್ನು ಕೊಂದಿದ್ದ.

ನಂತರ, ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಇಬ್ಬರು ಸೇರಿ ಸುಶ್ಮಿತಾಳ ಶವವನ್ನು ಕೆರೆಗೆ ಎಸೆದಿದ್ದರು. ಈ ನಡುವೆ, ಸುಶ್ಮಿತಾ ನಾಪತ್ತೆಯಾಗಿದ್ದಾಳೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನವೆಂಬರ್​ 11ರಂದು ಕೆರೆಯಲ್ಲಿ ಆಕೆಯ ಶವ ಕೆರೆಯಲ್ಲಿ ತೇಲುತ್ತಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು, ನಾಪತ್ತೆ ಕೇಸ್​ ತನಿಖೆ ಕೈಗೆತ್ತಿಕೊಂಡ ಖಾಕಿ ಪಡೆಗೆ ಸೀದಾ ಅನುಮಾನ ಬಂದಿದ್ದು ಸುಶ್ಮಿತಾ ಪತಿ ಮತ್ತು ಆತನ ಪ್ರೇಯಸಿ ಮೇಲೆ. ಇದೀಗ, ಕೊಲೆಯಲ್ಲಿ ಇಬ್ಬರ ಕೈವಾಡವಿರುವುದು ಕಂಡುಬಂದಿದ್ದು ಆರೋಪಿ ಪತಿ ನಾಗರಾಜ್(28), ಆತನ ಸಹೊದರ ಮೋಹನ್ ಹಾಗೂ ನಾಗರಾಜ್ ಗೆಳತಿ ಶೈಲಾರನ್ನು ಪೊಲೀಸರು ಬಂಧಿಸಿದ್ದಾರೆ.

Published On - 5:23 pm, Mon, 23 November 20

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ