AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಕೇರಳಕ್ಕೆ ಸಾಗಿಸ್ತಿದ್ದ 500 ಮೂಟೆ ಪಡಿತರ ಅಕ್ಕಿ ವಶ, ಎಲ್ಲಿ?

ಮೈಸೂರು: ಕೊರೊನಾ ಲಾಕ್​ಡೌನ್ ನಡುವೆಯೂ ಅಕ್ರಮವಾಗಿ ಸಾಗಿಸ್ತಿದ್ದ 500 ಮೂಟೆ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ಮೂಲದ ಲಾರಿಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ರೈಸ್ ಮಿಲ್‌ನಿಂದ ನಂಜನಗೂಡು ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು. ಈ ವೇಳೆ ಕಾರ್ಯಾಚರಣೆಗೆ ಇಳಿದಿದ್ದ ನಂಜನಗೂಡಿನ ಆಹಾರ ಇಲಾಖೆ ಮತ್ತು ಪೊಲೀಸರು ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆಯ ಬಳಿ ಸುಮಾರು 500 ಅಕ್ಕಿ ಮೂಟೆ ಸಾಗಿಸುತ್ತಿದ್ದ ಲಾರಿ ಹಾಗೂ ಕೇರಳ ಮೂಲದ ನಿಜಾಮುದ್ದೀನ್​ನನ್ನು […]

ಅಕ್ರಮವಾಗಿ ಕೇರಳಕ್ಕೆ ಸಾಗಿಸ್ತಿದ್ದ 500 ಮೂಟೆ ಪಡಿತರ ಅಕ್ಕಿ ವಶ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 12:55 PM

Share

ಮೈಸೂರು: ಕೊರೊನಾ ಲಾಕ್​ಡೌನ್ ನಡುವೆಯೂ ಅಕ್ರಮವಾಗಿ ಸಾಗಿಸ್ತಿದ್ದ 500 ಮೂಟೆ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ಮೂಲದ ಲಾರಿಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ರೈಸ್ ಮಿಲ್‌ನಿಂದ ನಂಜನಗೂಡು ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು.

ಈ ವೇಳೆ ಕಾರ್ಯಾಚರಣೆಗೆ ಇಳಿದಿದ್ದ ನಂಜನಗೂಡಿನ ಆಹಾರ ಇಲಾಖೆ ಮತ್ತು ಪೊಲೀಸರು ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆಯ ಬಳಿ ಸುಮಾರು 500 ಅಕ್ಕಿ ಮೂಟೆ ಸಾಗಿಸುತ್ತಿದ್ದ ಲಾರಿ ಹಾಗೂ ಕೇರಳ ಮೂಲದ ನಿಜಾಮುದ್ದೀನ್​ನನ್ನು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:19 am, Wed, 13 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು