AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿಚಾರ ಫೇಸ್​ಬುಕ್​ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

ಮೈಸೂರು: ಕೊರೊನಾ ಪಾಸಿಟಿವ್ ವಿಚಾರದಲ್ಲಿ ಫೇಸ್​ಬುಕ್​ನಲ್ಲಿ ಸುಳ್ಳು ಸುದ್ದಿ ಹಬ್ಬಿದ್ದ ಕಿಡಿಗೇಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡಿನ ಎಕ್ಸ್‌ಟೆನ್ಶನ್ ಬಡಾವಣೆಯ ಪ್ರಜ್ವಲ್ ಕಶ್ಯಪ್ ಬಂಧಿತ ವ್ಯಕ್ತಿ. ಈತ ನಂಜನಗೂಡು ಸಮಾಚಾರ ಎಂಬ ಹೆಸರಲ್ಲಿ ತಪ್ಪು ಮಾಹಿತಿ ರವಾನಿಸುತ್ತಿದ್ದ. ನಂಜನಗೂಡಿನ ಐವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಮಾಹಿತಿ ನೀಡುವ ಪೋಸ್ಟ್​ನ್ನು ಫೇಸ್​ಬುಕ್​ನಲ್ಲಿ ಹಾಕಿಕೊಂಡಿದ್ದ. ಮಹಾರಾಷ್ಟ್ರದಿಂದ ಬಂದ 19 ಮಂದಿ ಪೈಕಿ ಐವರಿಗೆ ಕೊರೊನಾ ಸೋಂಕು ಧೃಢವಾಗಿತ್ತು. ಐವರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಯಾರು ನಂಜನಗೂಡಿಗೆ […]

ಕೊರೊನಾ ವಿಚಾರ ಫೇಸ್​ಬುಕ್​ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ
ಆಯೇಷಾ ಬಾನು
|

Updated on:Jun 15, 2020 | 11:24 AM

Share

ಮೈಸೂರು: ಕೊರೊನಾ ಪಾಸಿಟಿವ್ ವಿಚಾರದಲ್ಲಿ ಫೇಸ್​ಬುಕ್​ನಲ್ಲಿ ಸುಳ್ಳು ಸುದ್ದಿ ಹಬ್ಬಿದ್ದ ಕಿಡಿಗೇಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡಿನ ಎಕ್ಸ್‌ಟೆನ್ಶನ್ ಬಡಾವಣೆಯ ಪ್ರಜ್ವಲ್ ಕಶ್ಯಪ್ ಬಂಧಿತ ವ್ಯಕ್ತಿ. ಈತ ನಂಜನಗೂಡು ಸಮಾಚಾರ ಎಂಬ ಹೆಸರಲ್ಲಿ ತಪ್ಪು ಮಾಹಿತಿ ರವಾನಿಸುತ್ತಿದ್ದ. ನಂಜನಗೂಡಿನ ಐವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಮಾಹಿತಿ ನೀಡುವ ಪೋಸ್ಟ್​ನ್ನು ಫೇಸ್​ಬುಕ್​ನಲ್ಲಿ ಹಾಕಿಕೊಂಡಿದ್ದ.

ಮಹಾರಾಷ್ಟ್ರದಿಂದ ಬಂದ 19 ಮಂದಿ ಪೈಕಿ ಐವರಿಗೆ ಕೊರೊನಾ ಸೋಂಕು ಧೃಢವಾಗಿತ್ತು. ಐವರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಯಾರು ನಂಜನಗೂಡಿಗೆ ಬಂದಿರಲಿಲ್ಲ. ಆದರೂ ನಂಜನಗೂಡಿನ ನಾಲ್ಕು ಬಡಾವಣೆಗಳ ಹೆಸರನ್ನ ಉಲ್ಲೇಖಿಸಿ ಪಾಸಿಟಿವ್ ಪತ್ತೆ ಎಂದು ಪೋಸ್ಟ್ ಮಾಡಿದ್ದಾನೆ. ತಪ್ಪು ಮಾಹಿತಿ ನೀಡಿ ನಾಲ್ಕು ಬಡಾವಣೆ ನಿವಾಸಿಗಳ ಆತಂಕಕ್ಕೆ ಕಾರಣವಾಗಿದ್ದ ಪ್ರಜ್ವಲ್ ಕಶ್ಯಪ್​ನ ವಿರುದ್ಧ ಅಲ್ಲಿನ ನಿವಾಸಿಗಳು ನಂಜನಗೂಡಿನ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಪ್ರಜ್ವಲ್​ನನ್ನು ವಶಕ್ಕೆ ಪಡೆದಿದ್ದಾರೆ.

Published On - 10:41 am, Mon, 15 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ