AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ತೆಗೆಯುವಂತೆ ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ!

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ. ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ. ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ […]

ಕಾರು ತೆಗೆಯುವಂತೆ ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ!
ಆಯೇಷಾ ಬಾನು
|

Updated on: Oct 04, 2020 | 2:02 PM

Share

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ.

ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ.

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಿಶಾಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಿಶಾಂತ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.