ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ […]

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!
ಆಯೇಷಾ ಬಾನು

Updated on: Sep 23, 2020 | 8:32 AM

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us