ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಶಿಕ್ಷಕನ ಮೇಲೆ ಚಪ್ಪಲಿಯಿಂದ ಹಲ್ಲೆ.. ಎಲ್ಲಿ?

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆ ಆಚರಣೆ ವೇಳೆ ಬಡಾವಣೆಗೆ ಹೆಸರಿಡುವ ವಿಚಾರಕ್ಕೆ ಗಲಾಟೆ ಶುರುವಾಗಿ ನಿವೃತ್ತ ಶಿಕ್ಷಕನಿಗೆ ಮೈಸೂರು ಕ್ಯಾನ್ಸರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷನಾಗಿರುವ ರಮೇಶ್ ಚಪ್ಪಲಿಯಿಂದ ಹೊಡೆದಿದ್ದಾರೆ. ವಯಸ್ಸಿನ ಅಂತರವೂ ನೋಡದೇ ಚಪ್ಪಲಿಯಿಂದ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಲ್ಲೆಗೊಳಗಾದ ನಿವೃತ್ತ ಶಿಕ್ಷಕ ಬಿಳಿಕೆರೆ ಪೊಲೀಸ್ […]

ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಶಿಕ್ಷಕನ ಮೇಲೆ ಚಪ್ಪಲಿಯಿಂದ ಹಲ್ಲೆ.. ಎಲ್ಲಿ?
ಆಯೇಷಾ ಬಾನು

Updated on: Aug 16, 2020 | 8:57 AM

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ ಆಚರಣೆ ವೇಳೆ ಬಡಾವಣೆಗೆ ಹೆಸರಿಡುವ ವಿಚಾರಕ್ಕೆ ಗಲಾಟೆ ಶುರುವಾಗಿ ನಿವೃತ್ತ ಶಿಕ್ಷಕನಿಗೆ ಮೈಸೂರು ಕ್ಯಾನ್ಸರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷನಾಗಿರುವ ರಮೇಶ್ ಚಪ್ಪಲಿಯಿಂದ ಹೊಡೆದಿದ್ದಾರೆ. ವಯಸ್ಸಿನ ಅಂತರವೂ ನೋಡದೇ ಚಪ್ಪಲಿಯಿಂದ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಲ್ಲೆಗೊಳಗಾದ ನಿವೃತ್ತ ಶಿಕ್ಷಕ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us