ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ. ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ […]

ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?
ಸಾಧು ಶ್ರೀನಾಥ್​

Updated on: May 08, 2020 | 12:55 PM

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ.

ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ ನಂತರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಣಕಾಸಿನ ಸಮಸ್ಯೆಯೇ ಸಾವಿಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ಸಿಕ್ಕಿಲ್ಲ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us