
ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಕೋ ಲೇಔಟ್ನಲ್ಲಿ ನಡೆದಿದೆ. ಮೈಕೋ ಲೇಔಟ್ನ ರಮಣಶ್ರೀ ಎನ್ಕ್ಲೇವ್ ಬಳಿ ಘಟನೆ ನಡೆದಿದೆ.
ಸದ್ಯ, ನಾಲ್ವರ ಮೃತದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನಕರಾಜ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು?
ಜೀವನದಲ್ಲಿ ಜಿಗುಪ್ಸೆಯಾದ ಹಿನ್ನೆಲೆಯಲ್ಲಿ ಜನಕರಾಜ್ ಸಾವಿನ ನಿರ್ಧಾರ ತೆಗೆದುಕೊಂಡಿದ್ದನು ಎಂದು ಹೇಳಲಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿ ಸಹ ಆತ್ಮಹತ್ಯೆಗೆ ಶರಣಾಗಿದ್ದಳು.
ಹಾಗಾಗಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಜನಕರಾಜ್ ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Published On - 2:48 pm, Fri, 13 November 20