AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮನಿಗೆ ಕೊರೊನಾ ವಕ್ಕರಿಸಿದ್ದಕ್ಕೆ ಅಣ್ಣ ಆತ್ಮಹತ್ಯೆಗೆ ಶರಣು?

ಕೋಲಾರ: ಚಿಕಿತ್ಸೆ ಫಲಿಸದೆ ಸೋಂಕಿತರು ಮೃತಪಟ್ಟಿರುವುದನ್ನು ಕಂಡಿದ್ದೇವೆ. ಚಿಕಿತ್ಸೆಯೇ ಸಿಗದೆ ಸಾವು ಕಂಡ ಉದಾಹರಣೆಗಳೂ ನಮ್ಮ ಮುಂದಿವೆ. ಆದರೆ ಇಲ್ಲೊಬ್ಬ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮ್ಮನಿಗೆ ವಕ್ಕರಿಸಿದ್ದ ಮಹಾಮಾರಿ, ತನಗೂ ವಕ್ಕರಿಸಬಹುದು ಅಂತಾ ಹೆದರಿ ಸಾವಿನ ಮನೆ ಸೇರಿದ್ದಾನೆ. ಕೊರೊನಾ ಕಂಟಕ ಎದುರಿಸಲಾಗದೆ ಕರುನಾಡು ಕಂಗಾಲಾಗಿ ಹೋಗಿದೆ. ಒಂದ್ಕಡೆ ದಿನನಿತ್ಯ ಸಾವಿರ, ಸಾವಿರ ಕೇಸ್​ಗಳು ಕನ್ಫರ್ಮ್ ಆಗುತ್ತಿವೆ. ಇನ್ನೊಂದ್ಕಡೆ ಸೋಂಕು ಎಲ್ಲಿ ತಮಗು ಹಬ್ಬಿಬಿಡುತ್ತೋ ಅನ್ನೋ ಭಯ ಎಲ್ಲರನ್ನೂ ಕಾಡುತ್ತಿದೆ. ಈ ಭಯದಲ್ಲೇ ಚಿನ್ನದ […]

ತಮ್ಮನಿಗೆ ಕೊರೊನಾ ವಕ್ಕರಿಸಿದ್ದಕ್ಕೆ ಅಣ್ಣ ಆತ್ಮಹತ್ಯೆಗೆ ಶರಣು?
ಆಯೇಷಾ ಬಾನು
ಆಯೇಷಾ ಬಾನು|

Updated on: Jul 19, 2020 | 6:48 AM

Share

ಕೋಲಾರ: ಚಿಕಿತ್ಸೆ ಫಲಿಸದೆ ಸೋಂಕಿತರು ಮೃತಪಟ್ಟಿರುವುದನ್ನು ಕಂಡಿದ್ದೇವೆ. ಚಿಕಿತ್ಸೆಯೇ ಸಿಗದೆ ಸಾವು ಕಂಡ ಉದಾಹರಣೆಗಳೂ ನಮ್ಮ ಮುಂದಿವೆ. ಆದರೆ ಇಲ್ಲೊಬ್ಬ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮ್ಮನಿಗೆ ವಕ್ಕರಿಸಿದ್ದ ಮಹಾಮಾರಿ, ತನಗೂ ವಕ್ಕರಿಸಬಹುದು ಅಂತಾ ಹೆದರಿ ಸಾವಿನ ಮನೆ ಸೇರಿದ್ದಾನೆ.

ಕೊರೊನಾ ಕಂಟಕ ಎದುರಿಸಲಾಗದೆ ಕರುನಾಡು ಕಂಗಾಲಾಗಿ ಹೋಗಿದೆ. ಒಂದ್ಕಡೆ ದಿನನಿತ್ಯ ಸಾವಿರ, ಸಾವಿರ ಕೇಸ್​ಗಳು ಕನ್ಫರ್ಮ್ ಆಗುತ್ತಿವೆ. ಇನ್ನೊಂದ್ಕಡೆ ಸೋಂಕು ಎಲ್ಲಿ ತಮಗು ಹಬ್ಬಿಬಿಡುತ್ತೋ ಅನ್ನೋ ಭಯ ಎಲ್ಲರನ್ನೂ ಕಾಡುತ್ತಿದೆ. ಈ ಭಯದಲ್ಲೇ ಚಿನ್ನದ ನಾಡು ಕೋಲಾರದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ.

ತಮ್ಮನಿಗೆ ಕೊರೊನಾ ವಕ್ಕರಿಸಿದ್ದಕ್ಕೆ ಅಣ್ಣ ಆತ್ಮಹತ್ಯೆಗೆ ಶರಣು? ಹೌದು ಇಂತಹದ್ದೊಂದು ಧಾರುಣ ಘಟನೆ ನಡೆದಿರೋದು ಕೋಲಾರದ ಗಾಂಧಿನಗರದಲ್ಲಿ. ಈಗ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ತಮ್ಮನಿಗೆ ಕೊರೊನಾ ಸೋಂಕು ವಕ್ಕರಿಸಿತ್ತು. 30 ವರ್ಷದ ತಮ್ಮನಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಮ್ಮನನ್ನು ಆಸ್ಪತ್ರೆಗೆ ದಾಖಲಿಸಿದ ವಿಷಯ ತಿಳಿಯುತ್ತಿದ್ದಂತೆ, ಅಣ್ಣ ಬೆಚ್ಚಿಬಿದ್ದಿದ್ದಾನೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದವನೇ ವಿಷಯ ತಿಳಿದು ಸೀದಾ ಮನೆಯ ಒಳಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ತಮ್ಮನಿಗೆ ಕೊರೊನಾ ಸೋಂಕು ತಗುಲಿರುವುದರಿಂದ, ಈತನೇ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿ ತೀವ್ರ ಒತ್ತಡಕ್ಕೆ ಒಳಗಾಗಿದ್ದ ಎನ್ನಲಾಗುತ್ತಿದೆ.

ಕುಟುಂಬಸ್ಥರಿಗೆ ಧೈರ್ಯ ಹೇಳಿದ ಅಧಿಕಾರಿಗಳು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಆಗಮಿಸಿದ್ರು. ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ಭೇಟಿ ನೀಡಿದ್ರು. ಈ ವೇಳೆ ಮೃತನ ಕುಟುಂಬಸ್ಥರ ಜತೆ ಮಾತನಾಡಿದ ಅಧಿಕಾರಿಗಳು ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕೊರೊನಾ ಗುಣಪಡಿಸಬಹುದಾದ ಸೋಂಕಾಗಿದ್ದು, ಯಾರೂ ಭಯಪಡಬೇಕಾಗಿಲ್ಲ ಅಂತಾ ಧೈರ್ಯ ತುಂಬಿದ್ದಾರೆ.

ಗಲ್ ಪೇಟೆ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದ್ದು, ಸಾವಿಗೆ ನಿಖರವಾದ ಕಾರಣ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಸೋಂಕಿಗೆ ಹೆದರಿ ಯಾರೂ ಕೂಡ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಅಂತಾ ಆರೋಗ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!