ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ

ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು. ಜಮೀನು ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲೇ ಅನೇಕ ಮನಸ್ಥಾಪಗಳು ಉಂಟಾಗಿದ್ದವು. ಇದೆಲ್ಲದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ‌ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ […]

ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Edited By:

Updated on: Oct 01, 2020 | 10:48 AM

ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.

ಜಮೀನು ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲೇ ಅನೇಕ ಮನಸ್ಥಾಪಗಳು ಉಂಟಾಗಿದ್ದವು. ಇದೆಲ್ಲದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ‌ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us