ಧಾರಾಕಾರ ಮಳೆಯಿಂದ ಮರ ಬಿದ್ದು ವ್ಯಕ್ತಿ ದುರ್ಮರಣ, ಎಲ್ಲಿ?
ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ. ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು. ಈ […]

ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ.
ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು.
ಈ ವೇಳೆ ಮರ ಬಿದ್ದು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗ್ರಾಮಸ್ಥ ಹನುಮಂತಶೆಟ್ಟಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರುಣನ ಅವಾಂತರಕ್ಕೆ ಮೈಸೂರಲ್ಲಿ ಮತ್ತೊಂದು ಜೀವ ಬಲಿ
Published On - 8:10 am, Thu, 6 August 20



