AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ದಿವ್ಯ ನಿರ್ಲಕ್ಷ್ಯ: MRI ಸ್ಕ್ಯಾನಿಂಗ್ ವೇಳೆ ಪತ್ನಿಯ ಎದುರೇ ಹಾರಿ ಹೋಯ್ತು ಪತಿಯ ಜೀವ..

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ  ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ ನೀಡಲಾಗುತ್ತಿತ್ತು. ಡಿಸ್ಚಾರ್ಜ್ ಆದ 20 ದಿನದ […]

ವೈದ್ಯರ ದಿವ್ಯ ನಿರ್ಲಕ್ಷ್ಯ: MRI ಸ್ಕ್ಯಾನಿಂಗ್ ವೇಳೆ ಪತ್ನಿಯ ಎದುರೇ ಹಾರಿ ಹೋಯ್ತು ಪತಿಯ ಜೀವ..
ಆಯೇಷಾ ಬಾನು
|

Updated on: Nov 09, 2020 | 12:13 PM

Share

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ  ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ ನೀಡಲಾಗುತ್ತಿತ್ತು. ಡಿಸ್ಚಾರ್ಜ್ ಆದ 20 ದಿನದ ನಂತರ ರೋಗಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಸೋಕಿನಿಂದಾಗಿ (ಇನ್ಫೆಕ್ಷನ್​) ಗುಳ್ಳೆಗಳು ಕಾಣಿಸಿಕೊಂಡಿದ್ದವು. ವಿಕ್ರಮ್ ಆಸ್ಪತ್ರೆಯಲ್ಲಿ 4 ಭಾರಿ MRI ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಎಲ್ಲಾ ರಿಪೋರ್ಟ್​ಗಳು ನಾರ್ಮಲ್ ಬಂದಿತ್ತು. ಬಳಿಕ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್​ಗೆ ರವಾನಿಸಲಾಯಿತು.

ಆಕ್ಸಿಜನ್ ಪೈಪ್ ಕನೆಕ್ಟ್ ಮಾಡೋಕೆ ಒದ್ದಾಡಿದ ಸಿಬ್ಬಂದಿ ನವೆಂಬರ್ 7 ರಂದು ರೋಗಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ರೋಗಿಯ ಸ್ಥಿತಿ ಗಂಭೀರವಾಗಿದ್ದರೂ ಯಾವ ವೈದ್ಯರೂ ಚಿಕಿತ್ಸೆಗೆ ಮುಂದಾಗಿರಲಿಲ್ಲ. ರೋಗಿಯ ಕುಟುಂಬಸ್ಥರು ವೈದ್ಯರನ್ನು ಕೂಗಿ ಕರೆದಾಗ 20 ನಿಮಿಷದ ನಂತರ ಸಿಬ್ಬಂದಿ ಬಂದರು. MRI ಸ್ಕ್ಯಾನಿಂಗ್ ಮಾಡುವ ವೇಳೆ ಆಕ್ಸಿಜನ್ ಪೈಪ್ ಕನೆಕ್ಟ್ ಮಾಡಬೇಕಿತ್ತು. ಆದರೆ ಈ ವೇಳೆ ಅರ್ಧ ಗಂಟೆ ಕಾಲ ಸಿಬ್ಬಂದಿ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಅಲ್ಲಿ ಇಬ್ಬರು ಸಿಬ್ಬಂದಿಯಿದ್ದು ಅವರಿಗೆ ಆಕ್ಸಿಜನ್ ಪೈಪ್ ಹೇಗೆ ಕನೆಕ್ಟ್ ಮಾಡುವುದು, ಏನೂ ಕೂಡ ಗೊತ್ತಿಲ್ಲ. MRI ಸ್ಕ್ಯಾನಿಂಗ್ ವಾರ್ಡ್​ನಲ್ಲಿ 3 ಸಿಲಿಂಡರ್​ಗಳು ಖಾಲಿ ಇದ್ದವು. ಒಂದರಲ್ಲೂ ಆಕ್ಸಿಜನ್ ಇರಲಿಲ್ಲ. ಅಲ್ಲೆ ಇದ್ದ ಕೆಲ ಆಸ್ಪತ್ರೆ ಸಿಬ್ಬಂದಿ ಕೈ ಕಟ್ಟಿಕೊಂಡು ನಿಂತಿದ್ದರು.

ಈ ವೇಳೆ ರೋಗಿ ಕುಟುಂಬಸ್ಥರು ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ರವೀಂದ್ರನಾಥ್ ತಮ್ಮ ಮೂವರು ಮಕ್ಕಳನ್ನು ಅಗಲಿದ್ದಾರೆ. ಅತ್ತ, ರವೀಂದ್ರ ನಾಥ್ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆ ಒಳಗೆ ನಡೆದ ಇಡೀ ಘಟನೆಯ ವಿಡಿಯೋ ಟಿವಿ9 ಗೆ ಸಿಕ್ಕಿದೆ. ಕುಟುಂಬಸ್ಥರು SR ನಗರ ಪೊಲೀಸ್ ಸ್ಟೇಷನ್ ಮೊರೆ ಹೋಗಿದ್ದು, ಅಲ್ಲಿಯೂ ಪೊಲೀಸರು ಬೇಜವಾಬ್ದಾರಿತನ ತೋರಿದ್ದಾರಂತೆ. ಈ ಬಗ್ಗೆ ಕುಟುಂಬಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು