ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ

ಉಡುಪಿ: ಬೋರ್‌ವೆಲ್‌ ಕೊರೆಯುವಾಗ 15 ಅಡಿ ಭೂಮಿ ಕುಸಿದು ಸ್ಥಳದಲ್ಲಿ ನಿಂತಿದ್ದ ಕಾರ್ಮಿಕ ರೋಹಿತ್ ಖಾರ್ವಿ ಎಂಬ ವ್ಯಕ್ತಿ ಮಣ್ಣಿನಲ್ಲಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಡೆದಿದೆ. ಬೋರ್‌ವೆಲ್‌ ಕೊರೆಯುವಾಗ ಬೋರ್‌ವೆಲ್‌ ಪೈಪ್‌ ಸುತ್ತ 15 ಅಡಿ ಭೂಮಿ ಕುಸಿದಿದೆ. ಈ ವೇಳೆ ಸ್ಥಳದಲ್ಲಿ ನಿಂತಿದ್ದ ರೋಹಿತ್ ಖಾರ್ವಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಆತನನ್ನು ಮೇಲೆತ್ತಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಜೆಸಿಬಿಯ ಮೂಲಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹೊಂಡದ ಸುತ್ತ ಮಣ್ಣು ಕುಸಿಯದಂತೆ ಡ್ರಮ್ ಅಳವಡಿಕೆ ಮಾಡಲಾಗಿದೆ. […]

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ
ಸಾಧು ಶ್ರೀನಾಥ್​

Updated on: Feb 16, 2020 | 4:16 PM

ಉಡುಪಿ: ಬೋರ್‌ವೆಲ್‌ ಕೊರೆಯುವಾಗ 15 ಅಡಿ ಭೂಮಿ ಕುಸಿದು ಸ್ಥಳದಲ್ಲಿ ನಿಂತಿದ್ದ ಕಾರ್ಮಿಕ ರೋಹಿತ್ ಖಾರ್ವಿ ಎಂಬ ವ್ಯಕ್ತಿ ಮಣ್ಣಿನಲ್ಲಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಡೆದಿದೆ. ಬೋರ್‌ವೆಲ್‌ ಕೊರೆಯುವಾಗ ಬೋರ್‌ವೆಲ್‌ ಪೈಪ್‌ ಸುತ್ತ 15 ಅಡಿ ಭೂಮಿ ಕುಸಿದಿದೆ. ಈ ವೇಳೆ ಸ್ಥಳದಲ್ಲಿ ನಿಂತಿದ್ದ ರೋಹಿತ್ ಖಾರ್ವಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಆತನನ್ನು ಮೇಲೆತ್ತಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಜೆಸಿಬಿಯ ಮೂಲಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹೊಂಡದ ಸುತ್ತ ಮಣ್ಣು ಕುಸಿಯದಂತೆ ಡ್ರಮ್ ಅಳವಡಿಕೆ ಮಾಡಲಾಗಿದೆ. ಅಗ್ನಿಶಾಮಕ ದಳ, ವೈದ್ಯರು ಮತ್ತು ಸ್ಥಳೀಯರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ. ಸದ್ಯ ಸೇಫ್ ಅಗಿರೊ ರೋಹಿತ್ ಖಾರ್ವಿ ಸ್ಥಳದಲ್ಲಿರುವವರ ಜೊತೆ ಮಾತನಾಡುತ್ತಿದ್ದಾರೆ.

6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ:
ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕ ರೋಹಿತ್ ಖಾರ್ವಿಯನ್ನು ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಗಾಯವಿಲ್ಲದೆ ರೋಹಿತ್ ಅಪಾಯದಿಂದ ಪಾರಾಗಿದ್ದಾನೆ. ರೋಹಿತ್‌ಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

Published On - 1:56 pm, Sun, 16 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us