AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಆಟ: 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಆರೋಪಿಯ ಬಂಧನ

ಇಸ್ಪೀಟ್ ಆಟವಾಡಿ ನಾಗರಾಜ್ 800 ರೂ ಗೆದ್ದಿದ್ದ. ಹೊರಡುವಾಗ ಹಣ ಗೆದ್ದು ಹೋಗಬೇಡ ಎಂದು ಮೂರ್ತಿ ಅಡ್ಡಿಪಡಿಸಿದ್ದ.

ಇಸ್ಪೀಟ್ ಆಟ: 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಆರೋಪಿಯ ಬಂಧನ
ಬಂಧಿತ ಆರೋಪಿ ನಾಗರಾಜ್​
ಪೃಥ್ವಿಶಂಕರ
| Edited By: |

Updated on: Jan 21, 2021 | 8:43 PM

Share

ಹಾಸನ: ಕೇವಲ 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಹಂತಕನನ್ನು ಹೊಳೆನರಸೀಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ನಾಗರಾಜ್ (62) ಬಂಧಿತ ಆರೋಪಿ. ಜನವರಿ 17 ರಂದು ದೊಣ್ಣೆಯಿಂದ ಬಡಿದು ಗೆಳೆಯನನ್ನ ಹತ್ಯೆ ಮಾಡಿದ್ದ. ಸ್ನೇಹಿತ ಮೂರ್ತಿ(48) ಜೊತೆ ಇಸ್ಪೀಟ್ ಆಟವಾಡಿ ನಾಗರಾಜ್ 800 ರೂ ಗೆದ್ದಿದ್ದ. ಗೆದ್ದು ಹೊರಡುವಾಗ ಹಣ ಗೆದ್ದು ಹೋಗಬೇಡ ಎಂದು ಮೂರ್ತಿ ಅಡ್ಡಿಪಡಿಸಿದ್ದ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಸ್ನೇಹಿತ ಮೂರ್ತಿ ಮೇಲೆ ನಾಗರಾಜ್​ ಮಾರಾಣಾತಿಂಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದ.

ಗೆಳೆಯನನ್ನ ಕೊಂದ ನಾಗರಾಜ್​ ಸಾಕ್ಷಿ ನಾಶಕ್ಕಾಗಿ ಶವವನ್ನು ನೀರಿನಲ್ಲಿ ಮುಳುಗಿಸಿದ್ದ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಲಿಯಲ್ಲಿ ಈ ಘಟನೆ ನಡೆದಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹತ್ಯೆಯ ಬಳಿಕ ನಾಗರಾಜ್​ ಗ್ರಾಮದಿಂದ ನಾಪತ್ತೆಯಾಗಿದ್ದ. ಹೀಗಾಗಿ ಕೊಲೆ ಮಾಡಿ ಊರು ಬಿಟ್ಟಿದ್ದವನನ್ನು, ಘಟನೆ ನಡೆದ ಮೂರನೇ ದಿನಕ್ಕೆ ಪೊಲೀಸರು ಬೆನ್ನಟ್ಟಿ ಬಂದಿಸಿದ್ದಾರೆ.

ನಂಬಿದ ಸ್ನೇಹಿತನಿಂದಲೇ ನಡೆಯಿತಾ ಮೋಸ? ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್​ನೋಟ್​ನಲ್ಲಿತ್ತು ನೊಂದವನ ಕರುಣಾಜನಕ ಕತೆ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ