ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..
ನೇತ್ರಾವತಿ
ಆಯೇಷಾ ಬಾನು

Updated on: Dec 28, 2020 | 7:46 AM

ರಾಯಚೂರು: ಚಾಕು ಇರಿದು ಭೀಕರವಾಗಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವೆಂಕಟರಾಯಪೇಟೆ ಬಡಾವಣೆಯಲ್ಲಿ ನಡೆದಿದೆ. ನೇತ್ರಾವತಿ(33) ಕೊಲೆಯಾದ ಮಹಿಳೆ.

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಶಿವರಾಜ್ ಕೊಲೆ ಮಾಡಿದ್ದಾನೆ ಎಂಬುವುದು ಮಾತ್ರ ಸ್ಪಷ್ಟವಾಗುತ್ತಿದೆ.

ಸದ್ಯ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿರುವ ಶಿವರಾಜ ತಲೆ ಮರೆಸಿಕೊಂಡಿದ್ದಾನೆ.

ಅನೈತಿಕ ಸಂಬಂಧ ಶಂಕೆ: ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾದ ಕುಡುಕ ಗಂಡ

Published On - 7:46 am, Mon, 28 December 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us