AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?
ವೈರಲ್​ ಆದ ವಿಡಿಯೋದ ದೃಶ್ಯ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 22, 2021 | 4:00 PM

Share

ಕೊರೊನಾ ವೈರಸ್​ ಹರಡುವ ಸಂದರ್ಭದಲ್ಲಿ ತಬ್ಲಿಘಿಗಳು ನಡೆಸಿದ ಸಭೆ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ತಬ್ಲಿಘಿಗಳು ಕೊರೊನಾ ವೈರಸ್​ ಹರಡಬೇಕು ಎನ್ನುವ ಉದ್ದೇಶಕ್ಕೇ ಈ ರೀತಿ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಅಷ್ಟೇ ಅಲ್ಲ, ಕೊರೊನಾ ಹರಡಬೇಕು ಎನ್ನುವ ಉದ್ದೇಶಕ್ಕೆ ನೋಟುಗಳಿಗೆ ಎಂಜಲು ಹಚ್ಚಿ ನೀಡಲಾಗುತ್ತಿದೆ ಎನ್ನುವ ಮಾತುಗಳೂ ಕೇಳಿ ಬಂದಿದ್ದವು. ಆ ಬಗ್ಗೆ ಅನೇಕ ಫ್ಯಾಕ್ಟ್ ​ಚೆಕ್​ಗಳು ಕೂಡ ನಡೆದವು. ಈಗ ಇಂತಹುದೇ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆ ಸಮಾರಂಭದಲ್ಲಿ ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್​ ಆಗಿದ್ದಾನೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಮದುವೆಗೆ ಸಾವಿರಾರು ಮಂದಿ ಕೂಡ ಸೇರಿದ್ದರು. ಅದ್ದೂರಿ ಕಾರ್ಯಕ್ರಮ ಆಗಿದ್ದರಿಂದ ನಾನಾ ರೀತಿಯ ಅಡುಗೆ ಕೂಡ ಸಿದ್ಧಪಡಿಸಲಾಗಿತ್ತು. ಬಂದ ಅತಿಥಿಗಳಿಗೆ ಬಿಸಿ ಬಿಸಿ ತಂದೂರಿ ರೊಟ್ಟಿ ನೀಡಲು ಕೌಂಟರ್​​ ಒಂದನ್ನು ತೆಗೆಯಲಾಗಿತ್ತು. ಆದರೆ, ಹೇಸಿಗೆಯ ವಿಚಾರ ಎಂದರೆ, ರೊಟ್ಟಿ ಮಾಡುವ ವ್ಯಕ್ತಿ ಎಂಜಲು ಉಗುಳಿ ಬೇಯಿಸುತ್ತಿದ್ದ!

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲ, ಈ ವಿಚಾರವನ್ನು ಗಂಡು-ಹೆಣ್ಣಿನ ಕಡೆಯವರಿಗೂ ತಿಳಿಸಿದ್ದಾರೆ. ಪೊಲೀಸರು ಸದ್ಯ ಈತನನ್ನು ಅರೆಸ್ಟ್​ ಮಾಡಿದ್ದಾರೆ.

ಬಂಧಿತನ ಹೆಸರು ನೌಷಾದ್​. ಕೊರೊನಾ ವೈರಸ್​ ಹರಡಲು ನೌಷಾದ್​ ಎಂಜಲು ಹಚ್ಚುತ್ತಿದ್ದ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಅಡಿಯಲ್ಲಿ ನೌಷಾದ್​​ನನ್ನು ಬಂಧಿಸಲಾಗಿದೆ. ಆತನಿಗೆ ಕೊರೊನಾ ವೈರಸ್​ ಇದೇಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಕೊರೊನಾ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ತಂದೂರಿ ರೊಟ್ಟಿ ಸಾಮಾನ್ಯ ರೊಟ್ಟಿಗಿಂತ ಭಿನ್ನವಾಗಿರುತ್ತದೆ. ರೊಟ್ಟಿಯನ್ನು ಬೇಯಿಸೋದು ಕೂಡ ಭಿನ್ನವೇ. ರೊಟ್ಟಿಯನ್ನು ಬಂಡಿಯ ಮೇಲೆ ಬೇಯಿಸಿದರೆ, ತಂದೂರಿ ರೊಟ್ಟಿ ಸುಡಲು ಬೇರೆಯದೆ ರೀತಿಯ ಒಲೆ ಇರುತ್ತದೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ