AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?
ವೈರಲ್​ ಆದ ವಿಡಿಯೋದ ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 4:00 PM

Share

ಕೊರೊನಾ ವೈರಸ್​ ಹರಡುವ ಸಂದರ್ಭದಲ್ಲಿ ತಬ್ಲಿಘಿಗಳು ನಡೆಸಿದ ಸಭೆ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ತಬ್ಲಿಘಿಗಳು ಕೊರೊನಾ ವೈರಸ್​ ಹರಡಬೇಕು ಎನ್ನುವ ಉದ್ದೇಶಕ್ಕೇ ಈ ರೀತಿ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಅಷ್ಟೇ ಅಲ್ಲ, ಕೊರೊನಾ ಹರಡಬೇಕು ಎನ್ನುವ ಉದ್ದೇಶಕ್ಕೆ ನೋಟುಗಳಿಗೆ ಎಂಜಲು ಹಚ್ಚಿ ನೀಡಲಾಗುತ್ತಿದೆ ಎನ್ನುವ ಮಾತುಗಳೂ ಕೇಳಿ ಬಂದಿದ್ದವು. ಆ ಬಗ್ಗೆ ಅನೇಕ ಫ್ಯಾಕ್ಟ್ ​ಚೆಕ್​ಗಳು ಕೂಡ ನಡೆದವು. ಈಗ ಇಂತಹುದೇ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆ ಸಮಾರಂಭದಲ್ಲಿ ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್​ ಆಗಿದ್ದಾನೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಮದುವೆಗೆ ಸಾವಿರಾರು ಮಂದಿ ಕೂಡ ಸೇರಿದ್ದರು. ಅದ್ದೂರಿ ಕಾರ್ಯಕ್ರಮ ಆಗಿದ್ದರಿಂದ ನಾನಾ ರೀತಿಯ ಅಡುಗೆ ಕೂಡ ಸಿದ್ಧಪಡಿಸಲಾಗಿತ್ತು. ಬಂದ ಅತಿಥಿಗಳಿಗೆ ಬಿಸಿ ಬಿಸಿ ತಂದೂರಿ ರೊಟ್ಟಿ ನೀಡಲು ಕೌಂಟರ್​​ ಒಂದನ್ನು ತೆಗೆಯಲಾಗಿತ್ತು. ಆದರೆ, ಹೇಸಿಗೆಯ ವಿಚಾರ ಎಂದರೆ, ರೊಟ್ಟಿ ಮಾಡುವ ವ್ಯಕ್ತಿ ಎಂಜಲು ಉಗುಳಿ ಬೇಯಿಸುತ್ತಿದ್ದ!

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲ, ಈ ವಿಚಾರವನ್ನು ಗಂಡು-ಹೆಣ್ಣಿನ ಕಡೆಯವರಿಗೂ ತಿಳಿಸಿದ್ದಾರೆ. ಪೊಲೀಸರು ಸದ್ಯ ಈತನನ್ನು ಅರೆಸ್ಟ್​ ಮಾಡಿದ್ದಾರೆ.

ಬಂಧಿತನ ಹೆಸರು ನೌಷಾದ್​. ಕೊರೊನಾ ವೈರಸ್​ ಹರಡಲು ನೌಷಾದ್​ ಎಂಜಲು ಹಚ್ಚುತ್ತಿದ್ದ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಅಡಿಯಲ್ಲಿ ನೌಷಾದ್​​ನನ್ನು ಬಂಧಿಸಲಾಗಿದೆ. ಆತನಿಗೆ ಕೊರೊನಾ ವೈರಸ್​ ಇದೇಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಕೊರೊನಾ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ತಂದೂರಿ ರೊಟ್ಟಿ ಸಾಮಾನ್ಯ ರೊಟ್ಟಿಗಿಂತ ಭಿನ್ನವಾಗಿರುತ್ತದೆ. ರೊಟ್ಟಿಯನ್ನು ಬೇಯಿಸೋದು ಕೂಡ ಭಿನ್ನವೇ. ರೊಟ್ಟಿಯನ್ನು ಬಂಡಿಯ ಮೇಲೆ ಬೇಯಿಸಿದರೆ, ತಂದೂರಿ ರೊಟ್ಟಿ ಸುಡಲು ಬೇರೆಯದೆ ರೀತಿಯ ಒಲೆ ಇರುತ್ತದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ