AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು […]

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 2:34 PM

Share

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು ಆರಂಭಿಸಿದೆ.

ಅಕ್ಕಪಕ್ಕದಲ್ಲಿದ್ದ ಎಲ್ಲರಿಗೂ ಶಾಕ್..! ಅಷ್ಟೊತ್ತಿಗಾಗಲೇ ಸ್ಕೂಟಿಯಲ್ಲಿ ಬಂದು ಕಾರಿನ ಹಿಂಭಾಗದಲ್ಲಿ ಪಾರ್ಕ್ ಮಾಡಿಕೊಂಡು ನಿಂತಿದ್ದ ಸವಾರ ಓಡಿಬಂದು ಕಾರ್ ಡೋರ್ ತೆಗೆದು ಡ್ರೈವರ್ ಸೀಟಿನಲ್ಲಿ ಕುಳಿತು, ಕೂಡಲೇ ಕಾರಿನ ಬ್ರೇಕ್ ಹಾಕಿ, ಕಾರನ್ನು ಕಂಟ್ರೋಲ್ ಗೆ ತೆಗೆದುಕೊಂಡು ನಿಲ್ಲಿಸಿದ್ದಾನೆ!

ಅದೇ ರಸ್ತೆಯಲ್ಲಿ ಸಣ್ಣ ಮಕ್ಕಳ ಓಡಾಟ ಸೇರಿದಂತೆ ಜನಜಂಗುಳಿ ಹೆಚ್ಚಿತ್ತು. ಆದ್ರೆ ಥೇಟ್  ಸಿನಿಮಾ ಹೀರೋನಂತೆ ಬಂದ ವ್ಯಕ್ತಿ ಸಂಭವಿಸಬಹುದಾದ ಅನಾಹುತವನ್ನು ಕ್ಷಣ ಮಾತ್ರದಲ್ಲಿ ತಡೆದು ಸಾಹಸ ಮೆರೆದಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದ್ದು, ಬೈಕ್ ಸವಾರ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಂಡು ಸಮಯ ಪ್ರಜ್ಞೆ ಮೆರೆದಿರುವುದು ನಿಜಕ್ಕೂ ಶ್ಲಾಘನೀಯ.

Published On - 12:35 pm, Sat, 11 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ