AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು […]

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 2:34 PM

Share

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು ಆರಂಭಿಸಿದೆ.

ಅಕ್ಕಪಕ್ಕದಲ್ಲಿದ್ದ ಎಲ್ಲರಿಗೂ ಶಾಕ್..! ಅಷ್ಟೊತ್ತಿಗಾಗಲೇ ಸ್ಕೂಟಿಯಲ್ಲಿ ಬಂದು ಕಾರಿನ ಹಿಂಭಾಗದಲ್ಲಿ ಪಾರ್ಕ್ ಮಾಡಿಕೊಂಡು ನಿಂತಿದ್ದ ಸವಾರ ಓಡಿಬಂದು ಕಾರ್ ಡೋರ್ ತೆಗೆದು ಡ್ರೈವರ್ ಸೀಟಿನಲ್ಲಿ ಕುಳಿತು, ಕೂಡಲೇ ಕಾರಿನ ಬ್ರೇಕ್ ಹಾಕಿ, ಕಾರನ್ನು ಕಂಟ್ರೋಲ್ ಗೆ ತೆಗೆದುಕೊಂಡು ನಿಲ್ಲಿಸಿದ್ದಾನೆ!

ಅದೇ ರಸ್ತೆಯಲ್ಲಿ ಸಣ್ಣ ಮಕ್ಕಳ ಓಡಾಟ ಸೇರಿದಂತೆ ಜನಜಂಗುಳಿ ಹೆಚ್ಚಿತ್ತು. ಆದ್ರೆ ಥೇಟ್  ಸಿನಿಮಾ ಹೀರೋನಂತೆ ಬಂದ ವ್ಯಕ್ತಿ ಸಂಭವಿಸಬಹುದಾದ ಅನಾಹುತವನ್ನು ಕ್ಷಣ ಮಾತ್ರದಲ್ಲಿ ತಡೆದು ಸಾಹಸ ಮೆರೆದಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದ್ದು, ಬೈಕ್ ಸವಾರ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಂಡು ಸಮಯ ಪ್ರಜ್ಞೆ ಮೆರೆದಿರುವುದು ನಿಜಕ್ಕೂ ಶ್ಲಾಘನೀಯ.

Published On - 12:35 pm, Sat, 11 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ