AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು […]

ಚಾಲಕ ಇಲ್ಲದೆಯೇ ಚಲಿಸ್ತಿದ್ದ ಕಾರು! ಬೈಕ್ ಸವಾರನಿಂದ ತಪ್ಪಿತು ಭಾರಿ ಅನಾಹುತ.. ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 11, 2020 | 2:34 PM

Share

ಚಿಕ್ಕಮಗಳೂರು: ಚಾಲಕನೆ ಇಲ್ಲದೆ ಚಲಿಸುತ್ತಿದ್ದ ಕಾರನ್ನ ಹಿಂದೆ ಬರುತಿದ್ದ ಬೈಕ್ ಸವಾರನ್ನೊಬ್ಬ ಕಂಟ್ರೋಲ್ ಗೆ ತೆಗೆದುಕೊಂಡು ನಡೆಯ ಬೇಕಿದ್ದ ಅನಾಹುತವೊಂದನ್ನ ಕೂದಲೆಳೆ ಅಂತರದಲ್ಲಿ ತಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಹೌದು, ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಯುವತಿ ಕೂಡ ಅದೇನು ನೆನಪಾಯಿತೋ ಗೊತ್ತಿಲ್ಲ. ಡೋರ್ ತೆಗೆದು ಕಾರಿನಿಂದ ಕೆಳಗಿಳಿದಿದ್ದಾಳೆ ಅಷ್ಟೇ. ನಿಂತಿದ್ದ ಕಾರು ಚಾಲಕನಿಲ್ಲದೇ ಚಲಿಸಲು ಆರಂಭಿಸಿದೆ.

ಅಕ್ಕಪಕ್ಕದಲ್ಲಿದ್ದ ಎಲ್ಲರಿಗೂ ಶಾಕ್..! ಅಷ್ಟೊತ್ತಿಗಾಗಲೇ ಸ್ಕೂಟಿಯಲ್ಲಿ ಬಂದು ಕಾರಿನ ಹಿಂಭಾಗದಲ್ಲಿ ಪಾರ್ಕ್ ಮಾಡಿಕೊಂಡು ನಿಂತಿದ್ದ ಸವಾರ ಓಡಿಬಂದು ಕಾರ್ ಡೋರ್ ತೆಗೆದು ಡ್ರೈವರ್ ಸೀಟಿನಲ್ಲಿ ಕುಳಿತು, ಕೂಡಲೇ ಕಾರಿನ ಬ್ರೇಕ್ ಹಾಕಿ, ಕಾರನ್ನು ಕಂಟ್ರೋಲ್ ಗೆ ತೆಗೆದುಕೊಂಡು ನಿಲ್ಲಿಸಿದ್ದಾನೆ!

ಅದೇ ರಸ್ತೆಯಲ್ಲಿ ಸಣ್ಣ ಮಕ್ಕಳ ಓಡಾಟ ಸೇರಿದಂತೆ ಜನಜಂಗುಳಿ ಹೆಚ್ಚಿತ್ತು. ಆದ್ರೆ ಥೇಟ್  ಸಿನಿಮಾ ಹೀರೋನಂತೆ ಬಂದ ವ್ಯಕ್ತಿ ಸಂಭವಿಸಬಹುದಾದ ಅನಾಹುತವನ್ನು ಕ್ಷಣ ಮಾತ್ರದಲ್ಲಿ ತಡೆದು ಸಾಹಸ ಮೆರೆದಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದ್ದು, ಬೈಕ್ ಸವಾರ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಂಡು ಸಮಯ ಪ್ರಜ್ಞೆ ಮೆರೆದಿರುವುದು ನಿಜಕ್ಕೂ ಶ್ಲಾಘನೀಯ.

Published On - 12:35 pm, Sat, 11 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ