
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಗಂಡನಿಂದಲೇ ಪತ್ನಿಯ ಕೊಲೆಯಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಹೊರವಲಯದಲ್ಲಿ ನಡೆದಿದೆ. ವಿದ್ಯಾ ಕೇಶಪ್ಪನವರ್(25) ಕೊಲೆಯಾದ ಮಹಿಳೆ.
ಹೆಂಡತಿಯನ್ನ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ನಂಬಿಸಿದ ಪತಿರಾಯ ನಿಂಗಪ್ಪ ಕೇಶಪ್ಪನವರ್ ದಾರಿ ಮಧ್ಯೆ ಹೆಂಡತಿಯ ಕತ್ತು ಹಿಸುಕಿ ಕೊಲೆಗೈದಿದ್ದಾನೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಂಗಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.