AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ. ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. […]

ಪತ್ನಿ ಮತ್ತು ಮಗನಿಗೆ ಕೊರೊನಾ: ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಆಯೇಷಾ ಬಾನು
|

Updated on: Jul 21, 2020 | 9:22 AM

Share

ಬೆಂಗಳೂರು: ಪತ್ನಿ, ಮಗನಿಗೆ ಕೊರೊನಾ ಹಿನ್ನೆಲೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಕಾಸು ನಗರ ನಿವಾಸಿ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ.

ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ಮಗ ವಾಸವಿದ್ದ. ಆತನಿಗೆ ಅರೋಗ್ಯ ಸರಿ ಇಲ್ಲದ ಕಾರಣ ಮಗನನ್ನು ನೋಡಿಕೊಳ್ಳಲು ನಾಗರಾಜು ಪತ್ನಿ ಬೆಂಗಳೂರಿಗೆ ಬಂದಿದ್ದರು. ಜ್ವರ ಜಾಸ್ತಿಯಾಗಿ ಮಗನಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಆತನಿಗೆ ಕೊರೊನಾ ಇರುವುದು ದೃಢವಾಗಿತ್ತು. ನಂತ್ರ ನಾಗರಾಜು ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರನ್ನು ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು.

ನೆರೆಹೊರೆಯವರ ವರ್ತನೆಗೆ ಆತ್ಮಹತ್ಯೆಗೆ ಮೊರೆ ಅಧಿಕಾರಿಗಳು ನಾಗರಾಜು ಮತ್ತು ಅವ್ರ ಇನ್ನೊಬ್ಬ ಮಗನನ್ನು ಕ್ವಾರಂಟೈನ್ ಮಾಡಿದ್ದರು. ಇವರಿದ್ದ ಏರಿಯಾ ಸೀಲ್​ಡೌನ್ ಮಾಡುವಾಗ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರು. ನಿಮ್ಮ ಮನೆಯಿಂದ, ನಿಮ್ಮಿಂದ ನಮಗೆಲ್ಲಾ ಸಮಸ್ಯೆಯಾಗಿದೆ ಎಂದು ಗಲಾಟೆ ಮಾಡಿದ್ರು.

ನೆರೆಹೊರೆಯವರ ವರ್ತನೆಯಿಂದ ನೊಂದು ಹೆಸರುಘಟ್ಟದ ಕೆರೆಯಲ್ಲಿ ಮರವೊಂದಕ್ಕೆ ನಾಗರಾಜು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್​ಗಾಗಿ ರವಾನಿಸಲಾಗಿದ್ದು, ವರದಿ ಬಂದ ನಂತ್ರ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ