AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಶಾಪಿಂಗ್​ಗೆ ಅಂತಾ ಮಾರ್ಕೆಟ್​ಗೆ ಹೋಗಿದ್ರಾ? ಹಬ್ಬದ ಖರೀದಿಗೆ ಹೋದವರಿಗೆ ಬಿಗ್ ಶಾಕ್ ?

ಬೆಂಗಳೂರು: ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಮಾರುಕಟ್ಟೆಗಳು ಜನರಿಂದ ತುಂಬಿ ಹೋಗಿದ್ದವು. ಜನ ಕೊರೊನಾವನ್ನು ಮರೆತು ಹೂವು, ಹಣ್ಣು ಖರೀದಿಗೆ ಮುಂದಾಗಿದ್ದರು. ಆದರೆ ಅಂದು ಮಾಡಿದ ಕೇರ್ ಲೆಸ್​ಗೆ ಇಂದು ಕೊರೊನಾ ಬಿಗ್ ಗಿಫ್ಟ್ ಕೊಡಲಿದೆ. ಅಕ್ಟೋಬರ್ 23 ಮತ್ತು 24ರಂದು ಕೆ.ಆರ್ ಮಾರ್ಕೆಟ್, ಮಲ್ಲೇಶ್ವರಂ ಹೂವಿನ ಮಾರ್ಕೆಟ್​ಗೆ ಬಂದು ಹೋದವರಿಗೆ ಕೋವಿಡ್ ತಗುಲಿರುವ ಸಾಧ್ಯತೆ ಹೆಚ್ಚಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಖರೀದಿಗಾಗಿ ಜನ ಮುಗಿಬಿದ್ದಿದ್ದರು. ಮಾಸ್ಕ್ ಹಾಕದೆ, ಸಾಮಾಜಿಕ ಅಂತರ […]

ದಸರಾ ಶಾಪಿಂಗ್​ಗೆ ಅಂತಾ ಮಾರ್ಕೆಟ್​ಗೆ ಹೋಗಿದ್ರಾ? ಹಬ್ಬದ ಖರೀದಿಗೆ ಹೋದವರಿಗೆ ಬಿಗ್ ಶಾಕ್ ?
ಆಯೇಷಾ ಬಾನು
|

Updated on:Oct 27, 2020 | 8:20 AM

Share

ಬೆಂಗಳೂರು: ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಮಾರುಕಟ್ಟೆಗಳು ಜನರಿಂದ ತುಂಬಿ ಹೋಗಿದ್ದವು. ಜನ ಕೊರೊನಾವನ್ನು ಮರೆತು ಹೂವು, ಹಣ್ಣು ಖರೀದಿಗೆ ಮುಂದಾಗಿದ್ದರು. ಆದರೆ ಅಂದು ಮಾಡಿದ ಕೇರ್ ಲೆಸ್​ಗೆ ಇಂದು ಕೊರೊನಾ ಬಿಗ್ ಗಿಫ್ಟ್ ಕೊಡಲಿದೆ.

ಅಕ್ಟೋಬರ್ 23 ಮತ್ತು 24ರಂದು ಕೆ.ಆರ್ ಮಾರ್ಕೆಟ್, ಮಲ್ಲೇಶ್ವರಂ ಹೂವಿನ ಮಾರ್ಕೆಟ್​ಗೆ ಬಂದು ಹೋದವರಿಗೆ ಕೋವಿಡ್ ತಗುಲಿರುವ ಸಾಧ್ಯತೆ ಹೆಚ್ಚಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಖರೀದಿಗಾಗಿ ಜನ ಮುಗಿಬಿದ್ದಿದ್ದರು. ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಾರುಕಟ್ಟೆಗಳು ಫುಲ್ ಆಗಿದ್ದವು, ಭರ್ಜರಿ ವ್ಯಾಪಾರವಾಗಿತ್ತು. ಈ ವೇಳೆ ಟಿವಿ9 ಸುದ್ದಿ ಪ್ರಸಾರ ಮಾಡಿ ಕೊರೊನಾ ತಗುಲುವ ಬಗ್ಗೆ ಎಚ್ಚರಿಸಿತ್ತು.

ಅಕ್ಟೋಬರ್ 23ರಂದು ಮಾರ್ಕೆಟ್​ಗೆ ಬಂದು ಹೋಗಿದ್ದ 53 ವರ್ಷದ ಓರ್ವ ವ್ಯಕ್ತಿಗೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದಾಗ ಸೋಂಕು ಇರುವುದು ದೃಢಪಟ್ಟಿದೆ. ಮಾರ್ಕೆಟ್​ನಲ್ಲಿ ಸೋಂಕಿತರು ಸಂಪರ್ಕಕ್ಕೆ ಬಂದಿರುವ ಅನುಮಾನ ಇದೆ ಎಂದಿದ್ದಾರೆ.

ಜೊತೆಗೆ ಅಕ್ಟೋಬರ್ 25 ರಂದು ಕೂಡ ಕೆ.ಆರ್ ಮಾರ್ಕೆಟ್, ಯಶವಂತಪುರ, ಮಲ್ಲೇಶ್ವರಂ, ಸಾರಕಿ ಮಾರ್ಕೆಟ್​ಗಳು ತುಂಬಿ ಹೋಗಿದ್ದವು. ಸದ್ಯ ಈಗ ಒಬ್ಬ ವ್ಯಕ್ತಿ ಸೋಂಕು ತಗುಲಿರುವುದ ತಿಳಿದು ಬಂದಿದೆ. ಆದರೆ ಮುಂದಿನ ಮೂರು ದಿನದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಸರಾ ವೇಳೆ ಕೊರೊನಾ ಬಗ್ಗೆ ಕೇರ್ ಮಾಡದವರಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.

ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲಿ ಅಪಾಯವನ್ನೇ ಮರೆತ ಜನ, ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸಂದಣಿ

Published On - 8:16 am, Tue, 27 October 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ