AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೆಂಟ್ ಬಿಲ್ ಉಳಿಸಲು ಮಾಲೀಕರು ಮಾಡಿದ ಎಡವಟ್ಟು, ಕಳ್ಳನಿಗಾಯ್ತು ವರದಾನ

ಮೇನ್ ಸ್ವಿಚ್ ಆಫ್ ಮಾಡಿ ಮಾಲೀಕರು ಮನೆಗೆ ಹೋಗುತ್ತಿದ್ದಂತೆ ಖತರ್ನಾಕ್ ಕಳ್ಳನೊಬ್ಬ ಅಂಗಡಿಗಳಿಗೆ ನುಗ್ಗಿ ಕಳ್ಳತನ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬಾಗಲೂರಿನಲ್ಲಿ ನಡೆದಿದೆ.

ಕರೆಂಟ್ ಬಿಲ್ ಉಳಿಸಲು ಮಾಲೀಕರು ಮಾಡಿದ ಎಡವಟ್ಟು, ಕಳ್ಳನಿಗಾಯ್ತು ವರದಾನ
ಕಳ್ಳತನ ಮಾಡುತ್ತಿರುವ ಖದೀಮ
ಆಯೇಷಾ ಬಾನು
| Edited By: |

Updated on:Feb 10, 2021 | 9:06 AM

Share

ಬೆಂಗಳೂರು: ಕರೆಂಟ್ ಬಿಲ್ ಉಳಿಸಲು ಮಾಲೀಕರು ಮಾಡಿದ ಎಡವಟ್ಟು ಐಡಿಯಾದಿಂದ ಈಗ ಮಾಲೀಕರು ಪೇಚಿಗೆ ಸಿಲುಕಿದಂತಾಗಿದೆ. ಮೇನ್ ಸ್ವಿಚ್ ಆಫ್ ಮಾಡಿ ಮಾಲೀಕರು ಮನೆಗೆ ಹೋಗುತ್ತಿದ್ದಂತೆ ಖತರ್ನಾಕ್ ಕಳ್ಳನೊಬ್ಬ ಅಂಗಡಿಗಳಿಗೆ ನುಗ್ಗಿ ಕಳ್ಳತನ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬಾಗಲೂರಿನಲ್ಲಿ ನಡೆದಿದೆ. ಮೇನ್ ಸ್ವಿಚ್ ಆಫ್ ಮಾಡುತ್ತಿದ್ದಂತೆ ಸಿಸಿ ಕ್ಯಾಮರಾ ಕೂಡ ಆಫ್ ಆಗುತ್ತೆ. ಇದನ್ನೇ ಬಂಡವಾಳ ಮಾಡ್ಕೊಂಡ ಖತರ್ನಾಕ್ ಖದೀಮ ಒಂದೇ ವಾರದಲ್ಲಿ ಒಂದೇ ಏರಿಯಾದ 4 ಶಾಪ್ ಕಳ್ಳತನ ಮಾಡಿದ್ದಾನೆ.

ಕರೆಂಟ್ ಸೇವ್ ಆಗುತ್ತೆ ಎಂದು ಅಂಗಡಿ ಮಾಲೀಕರು ಪವರ್ ಮೇನ್ ಸ್ವಿಚ್ ಆಫ್ ಮಾಡಿ ಮನೆಗೆ ಹೋಗುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ರಾತ್ರಿಯಾಗ್ತಿದ್ದಂತೆ ಎಚ್ಚರಗೊಳ್ಳುತ್ತಿದ್ದ ಈ ಖತರ್ನಾಕ್ ಕಳ್ಳ ದಿನಸಿ ಅಂಗಡಿ, ಮೆಡಿಕಲ್, ಮೊಬೈಲ್ ಶಾಪ್, ಹಾರ್ಡ್​ವೇರ್ ಶಾಪ್​ಗಳಿಗೆ ನುಗ್ಗಿ ಕೈಗೆ ಸಿಕ್ಕದನ್ನು ದೋಚಿದ್ದಾನೆ. ಆದ್ರೆ ಹಾರ್ಡ್ ವೇರ್ ಶಾಪ್​ನ ಸಿಸಿಟಿವಿಯಲ್ಲಿ ಮಾತ್ರ ಕಳ್ಳನ ಕೈ ಚಳಕ ಸೆರೆಯಾಗಿದ್ದು ಕೊನೆಗೂ ಖದೀಮನ ಸುಳಿವು ಸಿಕ್ಕಿದೆ.

ಈ ಕಳ್ಳ ಸುಮಾರು 50 ಸಾವಿರ ನಗದು ದೋಚಿದ್ದಾನೆ. ಮೊಬೈಲ್ ಶಾಪ್​ನಲ್ಲಿ 1ಲಕ್ಷ ಮೌಲ್ಯದ‌ ಮೊಬೈಲ್, ದಿನಸಿ ಅಂಗಡಿಯಲ್ಲಿ 10 ಸಾವಿರ ಮೌಲ್ಯದ ಸಿಗರೇಟ್, ಮೆಡಿಕಲ್ ಶಾಪ್​ನಲ್ಲಿ ಕೋರೆಕ್ಸ್ ಸಿರಪ್​ಗಳು , ಸಿರಿಂಜ್​ಗಳು ಸೇರಿದಂತೆ ಕ್ಯಾಶ್ ಕಳ್ಳತನ ಮಾಡಿದ್ದಾನೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿದ್ದು ಸದ್ಯ ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಕಳ್ಳನನ್ನು ಹಿಡಿಯಲು ಬಲೆ ಬೀಸಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಮೊಬೈಲ್ ಕಳ್ಳತನ: ಫೋನ್ ಕಳೆದುಹೋದರೆ ಏನು ಮಾಡಬೇಕು?

Published On - 7:51 am, Wed, 10 February 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ