AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಗದಗ: ಸ್ಕೂಟಿ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ನಗರದ ಠಾಗೋರ್ ರಸ್ತೆಯಲ್ಲಿ ನಡೆದಿದೆ. ಬೈಕ್ ಕಳ್ಳ ಕುಮಾರ್​ನನ್ನು ಜನ ಪೊಲೀಸರಿಗೊಪ್ಪಿಸಿದ್ದಾರೆ. ಶರಣು ಪಾಟೀಲ್‌ ಎಂಬುವವರಿಗೆ ಸೇರಿದ ಸ್ಕೂಟಿ ಕಳ್ಳತನ ಮಾಡುತ್ತಿದ್ದ ವೇಳೆ ವ್ಯಕ್ತಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಳ್ಳನನ್ನು ಹಿಡಿದು ಜನ ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ […]

ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ
ಆಯೇಷಾ ಬಾನು
|

Updated on:Nov 15, 2020 | 11:04 AM

Share

ಗದಗ: ಸ್ಕೂಟಿ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ನಗರದ ಠಾಗೋರ್ ರಸ್ತೆಯಲ್ಲಿ ನಡೆದಿದೆ. ಬೈಕ್ ಕಳ್ಳ ಕುಮಾರ್​ನನ್ನು ಜನ ಪೊಲೀಸರಿಗೊಪ್ಪಿಸಿದ್ದಾರೆ.

ಶರಣು ಪಾಟೀಲ್‌ ಎಂಬುವವರಿಗೆ ಸೇರಿದ ಸ್ಕೂಟಿ ಕಳ್ಳತನ ಮಾಡುತ್ತಿದ್ದ ವೇಳೆ ವ್ಯಕ್ತಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಳ್ಳನನ್ನು ಹಿಡಿದು ಜನ ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ.

ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಸಾರ್ವಜನಿಕರು ಕಳ್ಳನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗದಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರೈತರದ್ದೇ ಟ್ರ್ಯಾಕ್ಟರ್ ಕದ್ದು.. ರೈತರಿಗೇ ಲೀಸ್​ಗೆ ಬಿಡ್ತಿದ್ದ ಐನಾತಿ ಕಳ್ಳ ಕೊನೆಗೂ ಅಂದರ್!

Published On - 10:48 am, Sun, 15 November 20