AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. […]

ಗೋಸಾಯ್ ಘಾಟ್: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 18, 2020 | 9:31 AM

Share

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ.

3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಇನ್ನು ಇದೇ ನದಿ ಅಂಚಿನ ಕೃಷಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ಅಕ್ರಮವಾಗಿ ಅಸ್ಥಿ ವಿಸರ್ಜನೆ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ಮೌನ ಧರಿಸಿದ್ದಾರೆ. ಸದ್ಯ ಯುವಕನ‌ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಅಜ್ಜಿ ಸಾವಿನ ಜೊತೆಗೆ ಮೊಮ್ಮಗನ ಸಾವಾಗಿದ್ದು, ಕುಟುಂಬಸ್ಥರಿಗೆ ಕಣ್ಣೀರೆ ನದಿಯಂತೆ ಹರಿದಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೇಳೋರು ಕೇಳೋರು ಇಲ್ವೇ? ಐತಿಹಾಸಿಕ ಕೋಟೆ ಕಲ್ಲು ಕೆಡವಿ ಅನಧಿಕೃತ ಶೆಡ್ ನಿರ್ಮಾಣ!

Published On - 9:29 am, Sun, 18 October 20

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ